ಡಿಕೆ ಶಿವಕುಮಾರ್​ರನ್ನು ಭೇಟಿಯಾಗಿ ಕುತೂಹಲ ಕೆರಳುವಂತೆ ಮಾಡಿದ ಎಮ್ಮೆಲ್ಸಿ ರಾಜೇಂದ್ರ ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Apr 19, 2025 | 7:20 PM

ಡಿಸಿಎಂ ಶಿವಕುಮಾರ್ ಮನೆಗೆ ಇಂದು ಅನಿರೀಕ್ಷಿತ ಅತಿಥಿಗಳ ದಂಡು. ಮೊದಲು ಬಿಜೆಪಿ ಸಂಸದ ಬಿವೈ ರಾಘವೇಂದ್ರ, ನಂತರ ಬಿಜೆಪಿ ಮಾಜಿ ಸಂಸದ ಜಿಎಂ ಸಿದ್ದೇಶ್ವರ ಮತ್ತು ಕೊನೆಯಲ್ಲಿ ರಾಜೇಂದ್ರ. ಶಿವಕುಮಾರ್ ಮತ್ತು ರಾಜಣ್ಣ ನಡುವೆ ಎಣ್ಣೆ ಸೀಗೆಕಾಯಿ ಸಂಬಂಧ, ಸಹಕಾರ ಸಚಿವ ಕೆಪಿಸಿಸಿ ಅಧ್ಯಕ್ಷನಾಗಲು ಪ್ರಯತ್ನ ಮಾಡುತ್ತಿರುವುದು ಮತ್ತು ಹೆಚ್ಚುವರಿ ಡಿಸಿಎಂಗಳು ಬೇಕು ಅಂತ ಹೇಳಿರೋದು ಶಿವಕುಮಾರ್​​ಗೆ ಸರಿಕಂಡಿಲ್ಲ.

ಬೆಂಗಳೂರು, ಏಪ್ರಿಲ್ 19: ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಮತ್ತು ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಮಗ ರಾಜೇಂದ್ರ ರಾಜಣ್ಣ ಇಂದು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ರನ್ನ (DCM DK Shivakumar) ಅವರ ನಿವಾಸದಲ್ಲಿ ಭೇಟಿಯಾದರು. ಕುತೂಹಲಕಾರಿ ಯಾಕೆಂದರೆ, ತಮ್ಮ ಕೊಲೆ ಮಾಡಲು ಸುಪಾರಿ ನೀಡಿದ ಬಗ್ಗೆ ನಡೆದ ಮಾತುಕತೆ ಮತ್ತು ಅವರ ತಂದೆ ಅರೋಪಿಸುತ್ತಿರುವ ಹನಿ ಟ್ರ್ಯಾಪ್ ಪ್ರಕರಣದಲ್ಲಿ ಇಬ್ಬರೂ ದೂರು ದಾಖಲಿಸುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದರು. ಶಿವಕಮಾರ್ ಅವರನ್ನು ಭೇಟಿಯಾಗುವ ಗೋಜಿಗೆ ಹೋಗಿರಲಿಲ್ಲ. ಈಗ್ಯಾಕೆ ಹೋದರು ಅಂತ ಜನ ಯೋಚನೆ ಮಾಡುತ್ತಿದ್ದಾರೆ.

ಇದನ್ನೂ ಓದಿ:  ರಾಜೇಂದ್ರ ರಾಜಣ್ಣ ಹನಿಟ್ರ್ಯಾಪ್, ಕೊಲೆ ಯತ್ನದ ಸಂಚುಕೋರ ಒಬ್ಬನೇ! ಬೆಂಗಳೂರಿನ ಪ್ರಬಲ ವ್ಯಕ್ತಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.