ಬಿಬಿಎಂಪಿ ಚುನಾವಣೆ ಈ ವರ್ಷ ಕಳೆಯುವುದರೊಳಗೆ ನಡೆಯಲಿವೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: May 16, 2025 | 11:34 AM

ಬಿಬಿಎಂಪಿ ನಮ್ಮ ಸ್ವಂತದಲ್ಲ, ಎಲ್ಲರಿಗೂ ಸೇರಿದ್ದು ಹಾಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸುತ್ತೇವೆ, ಹೊಸ ಏರಿಯಾಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಬೇಕೆಂಬ ಉದ್ದೇಶವಿತ್ತು, ಆದರೆ ಗ್ರಾಮ ಪಂಚಾಯಿತಿ ಸದಸ್ಯರು ಪ್ರಸ್ತಾವನೆಗೆ ತಯಾರಾಗುತ್ತಿಲ್ಲ, ನಿನ್ನೆ ಗ್ರೇಟರ್ ಬೆಂಗಳೂರು ಅಧಿನಿಯಮ ಜಾರಿಗೆ ಬಂದಿರುವ ಕಾರಣ ಉಳಿದ ಸಂಗತಿಗಳನ್ನು ಮುಂದೆ ನೋಡಿಕೊಂಡರಾದೀತು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಮೇ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (BBMP ) ಆದಷ್ಟು ಬೇಗ ಚುನಾವಣೆಗಳನ್ನು ನಡೆಸಲಾಗುತ್ತದೆ, ರಾಜ್ಯಪಾಲರು ಸಹ ಹೇಳಿದ್ದಾರೆ, ಚುನಾವಣೆ ಮುಂದೂಡುವುದರಲ್ಲಿ ಅರ್ಥವಿಲ್ಲ, ಇನ್ನು 4 ತಿಂಗಳೊಳಗೆ ಒಟ್ಟಿನಲ್ಲಿ ಈ ವರ್ಷ ಮುಗಿಯುವುದರೊಳಗೆ ನಡೆಸುತ್ತೇವೆ ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಹೇಳಿದರು. ಸದ್ಯದಲ್ಲೇ ಮಿಸಲಾತಿ ಮತ್ತು ವಿಭಾಗಗಳ ಘೋಷಣೆ ಮಾಡಲಾಗುವುದು, ಮತ್ತು ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದು ಹೇಳಿದ ಶಿವಕುಮಾರ್, ಈ ಬಗ್ಗೆ ವಿಧಾನ ಸಭೆಯಲ್ಲೂ ಚರ್ಚೆಯಾಗಿದೆ, ವಿರೋಧ ಪಕ್ಷಗಳ ಶೇಕಡ 90ರಷ್ಟು ಅಭಿಪ್ರಾಯಗಳನ್ನು ಅಂಗೀಕರಿಸಿದ್ದೇವೆ ಎಂದರು.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಡಿಕೆ ಶಿವಕುಮಾರ್ ಕಲ್ಪನೆಯ ಕೂಸು, ಬೆಂಗಳೂರಲ್ಲಿ ವಿನೂತನ ಪ್ರಯೋಗ: ಜಿ ಪರಮೇಶ್ವರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.