AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ನಾಮಪತ್ರ ಸಲ್ಲಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಿದ್ಧಮಾಡಿಟ್ಟುಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ: ಡಿಕೆ ಸುರೇಶ್

Karnataka Assembly Polls; ನಾಮಪತ್ರ ಸಲ್ಲಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಿದ್ಧಮಾಡಿಟ್ಟುಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ: ಡಿಕೆ ಸುರೇಶ್

ಅರುಣ್​ ಕುಮಾರ್​ ಬೆಳ್ಳಿ
|

Updated on:Apr 19, 2023 | 2:39 PM

Share

ಹೈಕಮಾಂಡ್ ನಿಂದ ಆದೇಶ ಬಂದರೆ, ಪಕ್ಷದ ಪರವಾಗಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ರಘುನಾಥ್ ನಾಯ್ಡು ಹಿಂದೆ ಸರಿಯುವುದಾಗಿ ಹೇಳಿದ್ದಾರೆ, ಎಂದು ಸುರೇಶ್ ಪತ್ರಕರ್ತರಿಗೆ ತಿಳಿಸಿದರು.

ಬೆಂಗಳೂರು: ಸಂಸದ ಡಿಕೆ ಸುರೇಶ್ (DK Suresh) ಪದ್ಮನಾಭನಗರದಲ್ಲಿ ಬಿಜೆಪಿ ಅಭ್ಯರ್ಥಿ ಆರ್ ಅಶೋಕ (R Ashoka) ಅವರ ವಿರುದ್ಧ ಕಣಕ್ಕಳಿಯುವುದು ಕ್ರಮೇಣ ಖಚಿತವಾಗುತ್ತಿದೆ. ಬೆಂಗಳೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸುರೇಶ್ ನಾಮಪತ್ರ ಸಲ್ಲಿಸುವಾಗ ಅಗತ್ಯವಿರುವ ಎಲ್ಲ ದಾಖಲೆ ಪತ್ರಗಳನ್ನು ಸಿದ್ಧಮಾಡಿಟ್ಟುಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ, ರಾಹುಲ್ ಗಾಂಧಿ (Rahul Gandhi) ಮತ್ತು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ನಾಮಪತ್ರ ಸಲ್ಲಿಸುವಂತೆ ಆದೇಶ ನೀಡಿದರೆ ಖಂಡಿತ ಸಲ್ಲಿಸುವುದಾಗಿ ಸುರೇಶ್ ಹೇಳಿದರು. ಹೈಕಮಾಂಡ್ ನಿಂದ ಆದೇಶ ಬಂದರೆ, ಪಕ್ಷದ ಪರವಾಗಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ರಘುನಾಥ್ ನಾಯ್ಡು ಹಿಂದೆ ಸರಿಯುವುದಾಗಿ ಹೇಳಿದ್ದಾರೆ, ಎಂದು ಸುರೇಶ್ ಪತ್ರಕರ್ತರಿಗೆ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 19, 2023 02:39 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More