ಘಟಪ್ರಭಾ ನದಿಯಲ್ಲಿ ಬಲೆಗೆ ಬಿದ್ದ ಬೃಹತ್ ಗಾತ್ರದ ಮೀನು; ಅಚ್ಚರಿಗೊಂಡ ಗ್ರಾಮಸ್ಥರು

Edited By:

Updated on: Jul 11, 2024 | 3:25 PM

ಮುಧೋಳ ತಾಲ್ಲೂಕಿನ ಮಾಚಕನೂರ (Machakanur) ಬಳಿಯ ಘಟಪ್ರಭಾ ನದಿಯಲ್ಲಿ ಬೃಹತ್ ಗಾತ್ರದ ಮೀನೊಂದು(Fish) ಬಲೆಗೆ ಬಿದ್ದಿದೆ. ಬಾರಿ ಗಾತ್ರದ ಮೀನು ಕಂಡು ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ. ಇಷ್ಟು ತೂಕದ ಮೀನು  ಘಟಪ್ರಭಾ ನದಿಯಲ್ಲಿ ಅದು ಬಲೆಗೆ ಸಿಕ್ಕಿರುವುದು, ಇದೇ ಮೊದಲಾಗಿದೆ.

ಬಾಗಲಕೋಟೆ, ಜು.11: ಜಿಲ್ಲೆಯ ಮುಧೋಳ ತಾಲ್ಲೂಕಿನ ಮಾಚಕನೂರ (Machakanur) ಬಳಿಯ ಘಟಪ್ರಭಾ ನದಿಯಲ್ಲಿ ಬೃಹತ್ ಗಾತ್ರದ ಮೀನೊಂದು(Fish) ಬಲೆಗೆ ಬಿದ್ದಿದೆ. ಈ ಮೀನಿನ ತೂಕ ಬರೋಬ್ಬರಿ 15 ಕೆ.ಜಿ ಇದ್ದು, ಬಾರಿ ಗಾತ್ರದ ಮೀನು ಕಂಡು ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ. ಎಂದಿನಂತೆ ರೇವಣ್ಣ ಕೆಂಚಪ್ಪಗೋಳ ಎಂಬುವವರು ಮೀನು ಹಿಡಿಯಲು ಘಟಪ್ರಭಾ ನದಿಗೆ ಆಗಮಿಸಿದ್ದರು. ಈ ವೇಳೆ ಅಚ್ಚರಿ ಎಂಬಂತೆ ಬಾರೀ ತೂಕದ ಮೀನು ಬಲೆಗೆ ಬಿದ್ದಿದೆ. ಇಷ್ಟು ತೂಕದ ಮೀನು  ಘಟಪ್ರಭಾ ನದಿಯಲ್ಲಿ ಅದು ಬಲೆಗೆ ಸಿಕ್ಕಿರುವುದು, ಇದೇ ಮೊದಲು. ಹಾಗಾಗಿ ಜನರು ಬೆರಗಾಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More