ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಅದರಂತೆ ಇದೀಗ ಮಾರತಹಳ್ಳಿ ಹಾಗೂ ವರ್ತೂರು ಮುಖ್ಯರಸ್ತೆಯಲ್ಲಿ ಯುವಕ-ಯುವತಿ ಬೈಕ್​​ನಲ್ಲಿ ಹೋಗುತ್ತಿದ್ದಾಗ ಅಡ್ಡ ಹಾಕಿದ ಪುಂಡರು ಹಲ್ಲೆ ಮಾಡಿದ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 18, 2024 | 2:06 PM

ಬೆಂಗಳೂರು, ಫೆ.18: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ(Bengaluru) ಪುಂಡರ ಹಾವಳಿ ಮೀತಿಮಿರಿದೆ. ಈ ಕುರಿತು ಅನೇಕ ಪ್ರಕರಣಗಳು ದಾಖಲಾಗುತ್ತಿದ್ದರೂ ಇದಕ್ಕೆ ಪೊಲೀಸರು ಬ್ರೇಕ್​ ಹಾಕಲಾಗುತ್ತಿಲ್ಲ. ಈ ಹಿನ್ನಲೆ ಕಳೆದ ಎರಡು ದಿನದ ಹಿಂದೆ ಮಾರತಹಳ್ಳಿ ಹಾಗೂ ವರ್ತೂರು ಮುಖ್ಯರಸ್ತೆಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಯುವಕ-ಯುವತಿ ಇದ್ದ ಬೈಕ್​ನ್ನು ಅಡ್ಡ ಹಾಕಿದ ಯುವಕರು, ಬೈಕ್ ಬೀಳಿಸಿ ಹಲ್ಲೆ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಕಾರಿನಲ್ಲಿ ಕುಳಿತಿದ್ದವರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಘಟನೆ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳಿಗೆ ಪೊಲೀಸರು ಬುದ್ಧಿ ಹೇಳಿ ಕಳುಹಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Sun, 18 February 24

Follow us