AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ!

ಚಾಮರಾಜನಗರ: ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ!

ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 21, 2024 | 8:50 PM

Share

ಕಾವೇರಿ ಕೊಳ್ಳದ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದೆ. ಭರಚುಕ್ಕಿ ಜಲಪಾತಕ್ಕೆ ರಾಜ್ಯದ ನಾನ ಭಾಗಗಳಿಂದ ಪ್ರವಾಸಿಗರ ದಂಡೇ ಆಗಮಿಸ್ಥಯಿದ್ರೆ, ಇತ್ತ ಕೆಲ ಪ್ರವಾಸಿಗರು ಅರಣ್ಯ ಸಿಬ್ಬಂದಿಯ ಕಣ್ತಪ್ಪಿಸಿ ಡೆಡ್ಲಿ ಸ್ಪಾಟ್ ತಲುಪಿ ಸೆಲ್ಪಿ ತೆಗೆದುಕೊಳ್ಳುವಲ್ಲಿ ಮಗ್ನರಾಗಿದ್ದರು.

ಚಾಮರಾಜನಗರ, ಜು.21: ಕಾವೇರಿ ಕೊಳ್ಳದ ಪ್ರದೇಶದಲ್ಲಿ ಭಾರೀ ಮಳೆ ಆಗ್ತಾಯಿದೆ ಈ ಹಿನ್ನಲೆ ಕೃಷ್ಣರಾಜಸಾಗರಕ್ಕೆ ಭಾರೀ ಪ್ರಮಾಣದ ಇನ್ ಫ್ಲೊ ಇರುವ ಕಾರಣ ಚಾಮರಾಜನಗರ(Chamarajanagra) ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಭರಚುಕ್ಕಿ ಜಲಪಾತ ಬೋರ್ಗರೆಯುತ್ತಿದ್ದು, ಪ್ರವಾಸಿಗರು ರುದ್ರ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ರಾಜ್ಯದ ನಾನ ಭಾಗಗಳಿಂದ ಆಗಮಿಸುತ್ತಿದ್ದಾರೆ. ಕಾಂಕ್ರೀಟ್ ಕಾಡಿಂದ ಬೆಸತ್ತು ಸಿಗ್ನಲ್ ಕಿರಿಕಿರಿಯಿಂದ ರೋಸಿ ಹೋದ ಬೆಂಗಳೂರಿಗರೇ ಹೆಚ್ಚೆಚ್ಚಾಗಿ ಭರಚುಕ್ಕಿ ಫಾಲ್ಸ್ ಗೆ  ಬರುತ್ತಿದ್ದಾರೆ. ಹಚ್ಚ ಹಸಿರಿನ ಕಾನನ ಬಂಡೆಗಳ ಮದ್ಯೆ ಬೋರ್ಗೆಯುತ್ತ ಅತಿ ರಭಸವಾಗಿ ಹರಿಯುತ್ತಿರೊ ಕಾವೇರಿ ಮಾತೆಯನ್ನ ಕಂಡು ಪ್ರವಾಸಿಗರ ದಂಡು ಕುಟುಂಬಸ್ಥರ ಜೊತೆ ಫೋಟೊ ಶೂಟ್ ಮಾಡುವಲ್ಲಿ ಬ್ಯುಸಿಯಾಗಿದ್ದರು.  ಇನ್ನು ಕೆಲವರು ಮಳೆಯಲ್ಲೇ ನನೆಯುತ್ತ ಜಲಪಾತವನ್ನ ನೋಡುತ್ತ ರಿಲ್ಯಾಕ್ಸ್ ಆದರು. ಇವೆಲ್ಲದರ ಮಧ್ಯೆ ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ ಮೆರೆದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More