ಬೆಂಗಳೂರು: ಠಾಣೆಗೆ ಮುತ್ತಿಗೆ ಹಾಕಿದ ಶಾಸಕನ ಮುಂದೆಯೇ ACP ಚಂದನ್ ಕುಮಾರ್ ಆಕ್ರೋಶ
ಕೆಪಿಎಸ್ಸಿ ಪರೀಕ್ಷೆ ಮುಂದೂಡಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕಿದ್ದ ವಿದ್ಯಾರ್ಥಿಗಳ ಬಂಧನ ಖಂಡಿಸಿ ವಿಜಯನಗರ ಠಾಣೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಎಸಿಪಿ ಚಂದನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ವಿಡಿಯೋ ಇಲ್ಲಿದೆ.
ಬೆಂಗಳೂರು, ಆ.25: ಕೆಪಿಎಸ್ಸಿ ಪರೀಕ್ಷೆ ಮುಂದೂಡಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕಿದ್ದ ವಿದ್ಯಾರ್ಥಿಗಳ ಬಂಧನ ಖಂಡಿಸಿ ವಿಜಯನಗರ ಠಾಣೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಎಸಿಪಿ ಚಂದನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಯಾರು ನಿಮ್ಮನ್ನ ಒಳಕ್ಕೆ ಬಿಟ್ಟಿದ್ದು, ಶಾಸಕ ಧೀರಜ್ ಮುನಿರಾಜು ಸೇರಿ ಎಲ್ಲರನ್ನ ಒಳಗೆ ಪೊಲೀಸರು ಕರೆದೊಯ್ದಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದಾರೆ.
ವಿಜಯನಗರ ಮೆಟ್ರೋ ಸ್ಟೇಷನ್ ಬಳಿ ಇಂದು ಸಂಜೆ ಸಿಎಂ ಕಾರ್ಯಕ್ರಮ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಹಲವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಓರ್ವನ ತಲೆಗೆ ಗಾಯವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us