ಮಳೆಗೆ ಮನೆಯ ಮೇಲೆ ಬಿದ್ದ ಮರ; ಗಾಯಗೊಂಡ ವೃದ್ಧೆಯನ್ನ ಜೋಳಿಗೆ ಮೂಲಕ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು

ಚಿಕ್ಕಮಗಳೂರಿನಲ್ಲಿ ಬಿರುಗಾಳಿ‌‌‌ ಸಹಿತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು (ಜು.23) ಕಳಸ‌ ತಾಲೂಕಿನ ಕಾರ್ಲೆ ಗ್ರಾಮದಲ್ಲಿ ವೃದ್ದೆಯಿದ್ದ ಮನೆಯ ಮೇಲೆ ಬೃಹತ್​ ಮರವೊಂದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ವೃದ್ಧೆಗೆ ಗಂಭೀರ ಗಾಯವಾಗಿದ್ದು, ಸರಿಯಾದ ರಸ್ತೆ ಮಾರ್ಗವಿಲ್ಲದೆ, ಗ್ರಾಮಸ್ಥರು ಸೇರಿಕೊಂಡು ಜೋಳಿಗೆ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಮಳೆಗೆ ಮನೆಯ ಮೇಲೆ ಬಿದ್ದ ಮರ; ಗಾಯಗೊಂಡ ವೃದ್ಧೆಯನ್ನ ಜೋಳಿಗೆ ಮೂಲಕ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
|

Updated on: Jul 23, 2024 | 3:01 PM

ಚಿಕ್ಕಮಗಳೂರು, ಜು.23: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ‌‌‌ ಸಹಿತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು (ಮಂಗಳವಾರ) ಬಿರುಗಾಳಿ ಮಳೆಗೆ ಬೃಹತ್ ಮರವೊಂದು ಮನೆಯ ಮೇಲೆ ಮುರಿದು ಬಿದ್ದ ಘಟನೆ ಕಳಸ‌ ತಾಲೂಕಿನ ಕಾರ್ಲೆ ಗ್ರಾಮದಲ್ಲಿ ನಡೆದಿದೆ. ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ವೃದ್ಧೆಗೆ ಗಂಭೀರ ಗಾಯವಾಗಿದ್ದು, ಸರಿಯಾದ ರಸ್ತೆ ಮಾರ್ಗವಿಲ್ಲದೆ, ಗ್ರಾಮಸ್ಥರು ಸೇರಿಕೊಂಡು ಜೋಳಿಗೆ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೌದು, ಬರೋಬ್ಬರಿ ಮೂರು ಕಿಮೀ ಜೋಳಿಗೆ ಮೂಲಕ ವೃದ್ಧೆಯನ್ನ ಹೊತ್ತೊಕೊಂಡು ಸಾಗಿದ್ದಾರೆ. ಬಳಿಕ ವೃದ್ಧೆ ಬೆಲ್ಲಮ್ಮ (80) ಅವರನ್ನು ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಈ ಕಾರ್ಲೆ ಗ್ರಾಮಕ್ಕೆ ರಸ್ತೆ ಸರಿಪಡಿಸುವಂತೆ ಗ್ರಾಮಸ್ಥರುಮ, ನೂರಾರು ಬಾರಿ ಮನವಿ ಮಾಡಿದ್ದರು. ಆದರೆ, ಯಾರೊಬ್ಬರು ಈ ಕಡೆ ಮುಖಮಾಡಿಲ್ಲ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ