AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 06, 2024 | 10:05 PM

Share

ಕಾಲುವೆ ಸ್ವಚ್ಛ ಮಾಡದೇ ಸಣ್ಣ ನೀರಾವರಿ ಇಲಾಖೆ ನೀರು ಹರಿಬಿಟ್ಟಿದ್ದಕ್ಕೆ ಅಪಾರ ಪ್ರಮಾಣದ ನೀರು ಈರುಳ್ಳಿ ರಾಶಿಗೆ ನುಗ್ಗಿ ಅಪಾರ ಹಾನಿಯಾದ ಘಟನೆ ಗದಗ ಜಿಲ್ಲೆಯ ಮುಂಡರಗಿ(Mundaragi) ತಾಲೂಕಿನ ಡಂಬಳ ಗ್ರಾಮದಲ್ಲಿ ಘಟನೆ ನಡೆದಿದೆ. ನೂರಾರು ಕ್ವಿಂಟಾಲ್ ಈರುಳ್ಳಿ ನೀರು ಪಾಲಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಗದಗ, ಅ.06: ಕಾಲುವೆ ಸ್ವಚ್ಛ ಮಾಡದೇ ಸಣ್ಣ ನೀರಾವರಿ ಇಲಾಖೆ ನೀರು ಹರಿಬಿಟ್ಟಿದ್ದಕ್ಕೆ ಅಪಾರ ಪ್ರಮಾಣದ ನೀರು ಈರುಳ್ಳಿ ರಾಶಿಗೆ ನುಗ್ಗಿ ಅಪಾರ ಹಾನಿಯಾದ ಘಟನೆ ಗದಗ ಜಿಲ್ಲೆಯ ಮುಂಡರಗಿ(Mundaragi) ತಾಲೂಕಿನ ಡಂಬಳ ಗ್ರಾಮದಲ್ಲಿ ಘಟನೆ ನಡೆದಿದೆ. ನೂರಾರು ಕ್ವಿಂಟಾಲ್ ಈರುಳ್ಳಿ ನೀರು ಪಾಲಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಪಾರ ಪ್ರಮಾಣದ ಈರುಳ್ಳಿ ನೀರು ಪಾಲಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಟಾವು ಮಾಡಲು ಡಂಬಳ ಗ್ರಾಮದಲ್ಲಿ ನೂರಾರು ಕ್ವಿಂಟಾಲ್ ಈರುಳ್ಳಿ ಅಂಗಳದಲ್ಲಿ ಹಾಕಿದ್ದರು. ಸುಮಾರು 30-40 ರೈತರಿಗೆ ಸೇರಿದ್ದ ಈರುಳ್ಳಿ ಕಾಲುವೆ ಸ್ವಚ್ಛಗೊಳಿಸದೇ ನೀರು ಹರಿಬಿಟ್ಟಿದ್ದಕ್ಕೆ ಕಾಲುವೆ ಬ್ಲಾಕ್ ಆಗಿ ಅಪಾರ ನೀರು ರಸ್ತೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಈರುಳ್ಳಿ ಹಾಳಾಗಿದೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹೊರಹಾಕಿದ್ದಾರೆ. ನೀರು ಹರಿಯುತ್ತಿದ್ದರೂ ನಿಲ್ಲಿಸಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಯತ್ನ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಸೌಜನ್ಯಕ್ಕೂ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿಲ್ಲ ಎಂದು ರೈತರು ಗರಂ ಆಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರೈತರು ಗೋಳಾಡುತ್ತಿದ್ದಾರೆ. ಸಣ್ಣ ನೀರಾವರಿ ಇಲಾಖೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More