ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಶಾಲೆಗೆ ಬೀಗ ಹಾಕಿ ಪೋಷಕರ ಆಕ್ರೋಶ
ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಕಾಲಕಾಲೇಶ್ವರ ಸರ್ಕಾರಿ ಶಾಲೆಯ ಶಿಕ್ಷಕಿ ರೇಣುಕಾ ಎಂಬುವವರು ವಿದ್ಯಾರ್ಥಿಯೋರ್ವನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದು, ಶಿಕ್ಷಕಿ ಹೊಡೆತಕ್ಕೆ ವಿದ್ಯಾರ್ಥಿ ನರಳಾಟ ಅನುಭವಿಸುವಂತಾಗಿದೆ.
ಗದಗ, ಜು.03: ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಕಲಿಯಲಿ ಎಂದು ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಆದರೆ, ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಕಾಲಕಾಲೇಶ್ವರ ಸರ್ಕಾರಿ ಶಾಲೆಯ ಶಿಕ್ಷಕಿ ರೇಣುಕಾ ಎಂಬುವವರು ವಿದ್ಯಾರ್ಥಿಯೋರ್ವನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದು, ಶಿಕ್ಷಕಿ ಹೊಡೆತಕ್ಕೆ ವಿದ್ಯಾರ್ಥಿ ನರಳಾಟ ಅನುಭವಿಸುವಂತಾಗಿದೆ. ಈ ಹಿನ್ನಲೆ ಇಂದು(ಜು.03) ಶಾಲೆಗೆ ಆಗಮಿಸಿದ ಪೋಷಕರು ಶಾಲೆಗೆ ಬೀಗ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಇತ್ತ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದಾರೆ. ‘ತಕ್ಷಣ ಶಿಕ್ಷಕಿಯನ್ನ ಅಮಾನತು ಮಾಡಬೇಕು, ಇಲ್ಲವೆಂದರೆ ಬೇರೆ ಶಾಲೆಗೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಾಕಷ್ಟು ಬಾರಿ ಬಿಇಒ (BEO) ಗಮನಕ್ಕೆ ತಂದರೂ ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಸ್ಥಳಕ್ಕೆ DDPI ಬರುವಂತೆ ಪೋಷಕರ ಪಟ್ಟು ಹಿಡಿದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
