ಹಾವೇರಿ: ಲೇಡಿ ಕಂಡಕ್ಟರ್, ಡ್ರೈವರ್​ಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಬಸ್‌ ತಡೆದು ABVP ನೇತೃತ್ವದಲ್ಲಿ ಪ್ರತಿಭಟನೆ

ಶಕ್ತಿ ಯೋಜನೆ ಎಫೆಕ್ಟ್​​ ಹಿನ್ನಲೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದ್ದು, ಫುಟ್ ಬೋರ್ಡ್ ಮೇಲೆ ನಿಂತು ನೇತಾಡುತ್ತಾ ಶಾಲಾ ಕಾಲೇಜಿಗೆ ತೆರಳುವಂತಹ ಪರಿಸ್ಥಿತಿ ಎದುರಾಗಿದೆ. ಈ ಮಧ್ಯೆ ಲೇಡಿ ಕಂಡಕ್ಟರ್ ಹಾಗೂ ವಿದ್ಯಾರ್ಥಿ ನಡುವೆ ಗಲಾಟೆ ಆಗಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಇಂದು(ಬುಧವಾರ) ಹಾವೇರಿ(Haveri) ಬಸ್ ನಿಲ್ದಾಣದ ಎದುರು ಎಬಿವಿಪಿ (ABVP) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹಾವೇರಿ: ಲೇಡಿ ಕಂಡಕ್ಟರ್, ಡ್ರೈವರ್​ಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಬಸ್‌ ತಡೆದು ABVP ನೇತೃತ್ವದಲ್ಲಿ ಪ್ರತಿಭಟನೆ
|

Updated on: Jul 10, 2024 | 3:48 PM

ಹಾವೇರಿ, ಜು.10: ಶಕ್ತಿ ಯೋಜನೆ ಎಫೆಕ್ಟ್​​ನಿಂದ ವಿದ್ಯಾರ್ಥಿಗಳು(Students) ಪರದಾಟ ನಡೆಸುತ್ತಿದ್ದು, ಫುಟ್ ಬೋರ್ಡ್ ಮೇಲೆ ನಿಂತು ನೇತಾಡುತ್ತಾ ಶಾಲಾ ಕಾಲೇಜಿಗೆ ತೆರಳುವಂತಹ ಪರಿಸ್ಥಿತಿ ಇದೆ. ಹೀಗೆ ಬಸ್​ನಲ್ಲಿ ನಿಂತುಕೊಳ್ಳುವ ವಿಚಾರದಲ್ಲಿ ಜಗಳವೊಂದು ನಡೆದಿದ್ದು, ಲೇಡಿ ಕಂಡಕ್ಟರ್ ಹಾಗೂ ಡ್ರೈವರ್​ಗಳು ಸೇರಿಕೊಂಡು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಇಂದು(ಬುಧವಾರ) ಹಾವೇರಿ(Haveri) ಬಸ್ ನಿಲ್ದಾಣದ ಎದುರು ನೂರಾರು ವಿಧ್ಯಾರ್ಥಿಗಳು ಸೇರಿಕೊಂಡು ಬಸ್‌ ತಡೆದು ಎಬಿವಿಪಿ (ABVP) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗಾಂಧಿಪುರ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಮನೋಜ್ ಚಳ್ಳಾಳ ಎಂಬುವವನ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಬಸ್ ರಶ್ ಇದ್ದ ಹಿನ್ನಲೆ ವಿದ್ಯಾರ್ಥಿ ಮನೋಜ್ ಪುಟ್ ಬೋರ್ಡ್ ಮೇಲೆ ನಿಂತಿದ್ದ. ಈ ಹಿನ್ನಲೆ ಬಸ್ ಒಳಗೆ ಬರುವಂತೆ ಮಹಿಳಾ ಕಂಡಕ್ಟರ್ ಸೂಚಿಸಿದ್ದಾರೆ. ಅದಕ್ಕೆ ‘ಬಸ್ ರಶ್ ಇದೆ ಒಳಗೆ ಹೇಗೆ ಬರಲಿ ಎಂದು ವಿದ್ಯಾರ್ಥಿ ವಾದಿಸಿದ್ದನಂತೆ. ಈ ಹಿನ್ನಲೆ ಮಹಿಳಾ ಕಂಡಕ್ಟರ್ ವಿದ್ಯಾರ್ಥಿ ಕೊರಳ ಪಟ್ಟಿ ಹಿಡಿದು ಹಲ್ಲೆ ಮಾಡಿದ್ದು, ಬಳಿಕ ಹಾವೇರಿ ಬಸ್ ನಿಲ್ದಾಣದ ವಿಶ್ರಾಂತಿ ಕೊಠಡಿ ಒಳಗೆ ಕರೆದು ಕೂಡ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಇದೀಗ ಲೇಡಿ ಕಂಡಕ್ಟರ್ ಹಾಗೂ ವಿದ್ಯಾರ್ಥಿ ಜಗಳ ಹಾವೇರಿ ನಗರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್