Devanahalli: RRR ಸಿನಿಮಾ ಸ್ಟೈಲಲ್ಲಿ ಚಿನ್ನದಂಗಡಿ ದೋಚೋಕೆ ಬಂದ ಖದೀಮರು; ಕೃತ್ಯ ಸಿಸಿಟಿವಿಯಲ್ಲಿ ಸೆರೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 03, 2023 | 1:01 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಹೆದ್ದಾರಿಯಲ್ಲಿದ್ದ ಚಿನ್ನದಂಗಡಿ ದೋಚಲು ಖತರ್ನಾಕ್ ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ನಡೆದಿದ್ದು, ಖದೀಮರ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್​ ಆಗಿದೆ.

ಬೆಂಗಳೂರು ಗ್ರಾಮಾಂತರ, ಆ.3: ಜಿಲ್ಲೆಯ ಹೊಸಕೋಟೆ(Hosakote) ತಾಲೂಕಿನ ತಾವರೆಕೆರೆ ಗ್ರಾಮದ ಹೆದ್ದಾರಿಯಲ್ಲಿದ್ದ ಚಿನ್ನದಂಗಡಿ ದೋಚಲು ಖತರ್ನಾಕ್ ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಹೌದು, ಹೆದ್ದಾರಿಗೆ ಹೊಂದಿಕೊಂಡಿರುವ ಚಿನ್ನದಂಗಡಿಗೆ ಖದೀಮರು ಗ್ಯಾಸ್ ಕಟರ್ ಮೂಲಕ ಬಂದು ಕೆಜಿ ಗಟ್ಟಲೆ ಚಿನ್ನ ದೋಚಲು ಯತ್ನಿಸಿದ್ದರು. ಆದ್ರೆ, ಅಂಗಡಿಯಲ್ಲಿ ಸಿಬ್ಬಂದಿ ಇರುವುದನ್ನ ಕಂಡ ಖದೀಮರು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಇನ್ನು ಕಳ್ಳರ ವಿಫಲಯತ್ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More