ಕೋಲಾರ: ಭಾರತ್ ಅಕ್ಕಿ ಪಡೆಯಲು ಮುಗಿ ಬಿದ್ದ ಜನರು; ಕೆಲವೇ ಕ್ಷಣಗಳಲ್ಲಿ ಖಾಲಿಯಾದ ಕ್ಯಾಂಟರ್

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 06, 2024 | 10:16 PM

ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ಪಟ್ಟಣದ ಬಸ್ ನಿಲ್ದಾಣದ ಬಳಿ ಭಾರತ್ ಅಕ್ಕಿ(bharat brand rice) ಪಡೆಯಲು ಜನರು ಮುಗಿಬಿದ್ದ ಘಟನೆ ನಡೆದಿದೆ. ಹತ್ತು ಕೆ.ಜಿ ತೂಕದ ಬ್ಯಾಗ್​ಗಳನ್ನು ಕ್ಯಾಂಟರ್ ವಾಹನದಲ್ಲಿ ತುಂಬಿಕೊಂಡು ಬಂದು ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ನೋಡ‌ ನೋಡುತ್ತಲೇ ಭಾರತ್ ಅಕ್ಕಿ ಪಡೆಯಲು ಜನರ ನೂಕು ನುಗ್ಗಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಕ್ಯಾಂಟರ್ ಖಾಲಿಯಾಗಿದೆ. 

ಕೋಲಾರ, ಫೆ.06: ಭಾರತ್ ಅಕ್ಕಿ(bharat brand rice) ಪಡೆಯಲು ಜನರು ಮುಗಿಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ಪಟ್ಟಣದ ಬಸ್ ನಿಲ್ದಾಣದ ಬಳಿ ಕಂಡುಬಂದಿದೆ. ಒಬ್ಬೊಬ್ಬರು ಎರಡು ಮೂರು ಬ್ಯಾಗ್ ಅಕ್ಕಿ ಖರೀದಿ ಮಾಡಿದ್ದಾರೆ. ಹತ್ತು ಕೆ.ಜಿ ತೂಕದ ಬ್ಯಾಗ್​ಗಳನ್ನು ಕ್ಯಾಂಟರ್ ವಾಹನದಲ್ಲಿ ತುಂಬಿಕೊಂಡು ಬಂದು ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ನೋಡ‌ ನೋಡುತ್ತಲೇ ಭಾರತ್ ಅಕ್ಕಿ ಪಡೆಯಲು ಜನರ ನೂಕು ನುಗ್ಗಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಕ್ಯಾಂಟರ್ ಖಾಲಿಯಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More