AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮನೆಯ ಹೊರಗಡೆ ಮಲಗಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ; ವಿಡಿಯೋ ಸೆರೆ

ಮಂಗಳೂರು: ಮನೆಯ ಹೊರಗಡೆ ಮಲಗಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ; ವಿಡಿಯೋ ಸೆರೆ

ಅಶೋಕ್​ ಪೂಜಾರಿ, ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 12, 2024 | 4:45 PM

Share

ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿನತ್ತ ಲಗ್ಗೆಯಿಡುತ್ತಿವೆ. ಅದರಂತೆ ಇದೀಗ ಮಂಗಳೂರಿನ ಬಜ್ಪೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ನಿನ್ನೆ(ಗುರುವಾರ) ರಾತ್ರಿ ಪುಚ್ಚಾಳದ ಸುಂದರ್​ ಎಂಬುವವರ ಮನೆಯ ನಾಯಿ ಮರಿಯನ್ನು ಚಿರತೆ ಹೊತ್ತೊಯ್ದಿದೆ. ಚಿರತೆ ನಾಯಿಯನ್ನು ಬೇಟೆಯಾಡಿದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದಕ್ಷಿಣ ಕನ್ನಡ, ಜು.12: ಇತ್ತೀಚೆಗೆ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿನತ್ತ ಲಗ್ಗೆಯಿಡುತ್ತಿವೆ. ಅದರಂತೆ ಇದೀಗ ಮಂಗಳೂರಿನ ಬಜ್ಪೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಜನರು ಓಡಾಡಲು ಕೂಡ ಭಯಪಡುವ ಸನ್ನಿವೇಷ ರೂಪುಗೊಳ್ಳುತ್ತಿದೆ. ಹೌದು, ನಿನ್ನೆ(ಗುರುವಾರ) ರಾತ್ರಿ ಮಂಗಳೂರು ಹೊರವಲಯದ ಬಜ್ಪೆಯ ಪೆರಾರ ಎಂಬಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಪುಚ್ಚಾಳದ ಸುಂದರ್​ ಎಂಬುವವರ ಮನೆಯ ನಾಯಿ ಮರಿಯನ್ನು ಚಿರತೆ ಹೊತ್ತೊಯ್ದಿದೆ. ಚಿರತೆ ನಾಯಿಯನ್ನು ಬೇಟೆಯಾಡಿದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾತ್ರಿ ವೇಳೆ ಮನೆ ಮುಂದೆ ಮಲಗಿದ್ದ ನಾಯಿ ಮರಿಯನ್ನ ನೋಡಿದ ಚಿರತೆ, ಕಳ್ಳನಂತೆ ಬಂದು ಹೊತ್ತೊಯ್ದಿದೆ. ಕಳೆದ ಕೆಲ‌ದಿನಗಳಿಂದ ಬಜಪೆ ಪರಿಸರದಲ್ಲಿ ಚಿರತೆ ಒಡಾಡುತ್ತಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ನಾಗರಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More