ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್; ಮುಂದೆನಾಯ್ತು?

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 18, 2024 | 6:40 PM

ಆ್ಯಕ್ಸೆಲ್ ಕಟ್ ಆಗಿ ಕೆಎಸ್​ಆರ್​ಟಿಸಿ (KSTRC) ಬಸ್​ವೊಂದು ಜಮೀನಿಗೆ ನುಗ್ಗಿದ ಘಟನೆ ನಂಜನಗೂಡು(Nanjangud) ತಾಲೂಕಿನ ದೇಶಿಪುರ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಈ ಕುರಿತು ನಂಜನಗೂಡು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು, ಜೂ.18: ನಂಜನಗೂಡು(Nanjangud) ತಾಲೂಕಿನ ದೇಶಿಪುರ ಗ್ರಾಮದಲ್ಲಿ ಆ್ಯಕ್ಸೆಲ್ ಕಟ್ ಆಗಿ ಕೆಎಸ್​ಆರ್​ಟಿಸಿ (KSTRC) ಬಸ್​ವೊಂದು ಜಮೀನಿಗೆ ನುಗ್ಗಿದೆ. ಬೇಗೂರಿನಿಂದ ಹೆಚ್.ಡಿ ಕೋಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, 35 ಕ್ಕೂ ಹೆಚ್ಚು ಪ್ರಯಾಣಿಕರು ಬಸ್​​​ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಈ ಕುರಿತು ನಂಜನಗೂಡು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us on