5 ಸಾವಿರ ಬದಲಿಗೆ ಬಂತು 4040 ರೂ: ಬಾಕಿ ಹಣ ನೀಡದ ಎಟಿಎಂ ಮಷೀನ್‌, ಯುವತಿ ಕಕ್ಕಾಬಿಕ್ಕಿ

Edited By: ಕಿರಣ್ ಹನುಮಂತ್​ ಮಾದಾರ್

Updated on: May 25, 2024 | 3:59 PM

ರಾಮನಗರ ಬಸ್ ನಿಲ್ದಾಣದ ಬಳಿ ಇರುವ ಇಂಡಿಯಾ ಒನ್ ಎಟಿಎಂ‌ಗೆ ತೆರಳಿ, ಯುವತಿಯೊಬ್ಬರು ಒಟ್ಟು 5 ಸಾವಿರ ರೂ ವಿತ್ ಡ್ರಾ ಮಾಡಿದ್ದರು. ಆದರೆ 4040 ರೂ. ಮಾತ್ರ ಬಂದಿತ್ತು. ಕೂಡಲೇ ಯುವತಿ ಇಂಡಿಯಾ ಒನ್ ಎಟಿಎಂ ವಿರುದ್ಧ ಬ್ಯಾಂಕಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್ ಸಿಬ್ಬಂದಿ, ‘ತಾಂತ್ರಿಕ ದೋಷದಿಂದ ಹೀಗೆ ಆಗಿದೆ ಎಂದು ಸಬೂಬು ನೀಡಿದ್ದಾರೆ.

ರಾಮನಗರ, ಮೇ.25: ಯುವತಿಯೊಬ್ಬರು ಎಟಿಎಂ(ATM)ಗೆ ತೆರಳಿ 5‌ ಸಾವಿರ ರೂಪಾಯಿಯನ್ನು ವಿತ್ ಡ್ರಾ ಮಾಡಿದ್ದಾರೆ. ಆದರೆ, 4040 ರೂ. ಮಾತ್ರ ಬಂದ ಘಟನೆ ಮೇ.23 ರಂದು ರಾಮನಗರ(Ramanagara)ದಲ್ಲಿ ನಡೆದಿದೆ. ಎಟಿಎಂ ಮಷೀನ್‌ ಮಾಡಿದ ಯಡವಟ್ಟಿಗೆ ಯುವತಿ ಒಂದು ಬಾರಿ ಕಕ್ಕಾಬಿಕ್ಕಿ ಆಗಿದ್ದಾರೆ. ಹೌದು, ರಾಮನಗರ ಬಸ್ ನಿಲ್ದಾಣದ ಬಳಿ ಇರುವ ಇಂಡಿಯಾ ಒನ್ ಎಟಿಎಂ‌ಗೆ ತೆರಳಿ, ಯುವತಿಯೊಬ್ಬರು ಒಟ್ಟು 5 ಸಾವಿರ ರೂ ವಿತ್ ಡ್ರಾ ಮಾಡಿದ್ದರು. ಆದರೆ 4040 ರೂ. ಮಾತ್ರ ಬಂದಿತ್ತು. ಕೂಡಲೇ ಯುವತಿ ಇಂಡಿಯಾ ಒನ್ ಎಟಿಎಂ ವಿರುದ್ಧ ಬ್ಯಾಂಕಿಗೆ ದೂರು ನೀಡಿದ್ದಾರೆ. ಈ ವೇಳೆ ತಾಂತ್ರಿಕ ದೋಷದಿಂದ ಹೀಗೆ ಆಗಿದೆ ಎಂದು ಸಬೂಬು ನೀಡಿದ ಬ್ಯಾಂಕ್, ಉಳಿದ ಬಾಕಿ ಮೊತ್ತ ನೀಡುವುದಾಗಿ ಹೇಳಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ  ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More