AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಉದ್ಘಾಟನೆಗೂ ಮುನ್ನವೇ ಒಡೆದ ಪೈಪ್: ಆಕಾಶಕ್ಕೆ‌ ಚಿಮ್ಮಿದ ನೀರು

ರಾಮನಗರ: ಉದ್ಘಾಟನೆಗೂ ಮುನ್ನವೇ ಒಡೆದ ಪೈಪ್: ಆಕಾಶಕ್ಕೆ‌ ಚಿಮ್ಮಿದ ನೀರು

ಕಿರಣ್ ಹನುಮಂತ್​ ಮಾದಾರ್
|

Updated on: Aug 07, 2024 | 7:49 PM

Share

ಉದ್ಘಾಟನೆಗೂ ಮುನ್ನವೇ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಹಾಕಿದ ಪೈಪ್​ ಒಡೆದು ನೀರು ಆಕಾಶಕ್ಕೆ‌ ಚಿಮ್ಮಿದ ಘಟನೆ ರಾಮನಗರ ಪಟ್ಟಣದ ಎಮ್.ಜಿ.ರಸ್ತೆಯಲ್ಲಿ ನಡೆದಿದೆ. ಇದೇ ಆಗಸ್ಟ್ 15 ಕ್ಕೆ ಉದ್ಘಾಟನೆ ಆಗಬೇಕಿತ್ತು. ಆದರೆ ಉದ್ಘಾಟನೆಗೂ ಮೊದಲೇ ಪೈಪ್‌ ಒಡೆದು ಅವಾಂತರ ಸೃಷ್ಟಿಯಾಗಿದೆ.

ರಾಮನಗರ, ಆ.07: ರಾಮನಗರ(Ramanagara) ಕಾವೇರಿ ನೀರಿನ ಕುಡಿಯುವ ಯೋಜನೆಗೆ ಹಾಕಿದ ಪೈಪ್​ ಉದ್ಘಾಟನೆಗೂ ಮುನ್ನ ಒಡೆದು ನೀರು ಆಕಾಶಕ್ಕೆ‌ ಚಿಮ್ಮಿದ ಘಟನೆ ನಡೆದಿದೆ. ಪ್ರಾಯೋಗಿಕ‌ ಹಂತದಲ್ಲಿರುವ 24×7‌ ಕುಡಿಯುವ ನೀರಿನ ಯೋಜನೆ, ಇದೇ ಆಗಸ್ಟ್ 15 ಕ್ಕೆ ಉದ್ಘಾಟನೆ ಆಗಬೇಕಿತ್ತು. ದುರಾದೃಷ್ಟವಶಾತ್​ ಉದ್ಘಾಟನೆಗೂ ಮುನ್ನ‌ವೇ ಪೈಪ್‌ ಒಡೆದು ಅವಾಂತರ ಸೃಷ್ಟಿಯಾಗಿದೆ. ಹೌದು, ನೀರು ಚಿಮ್ಮಿದ‌ ರಭಸಕ್ಕೆ ಕೆಲ ವಾಹನಗಳು ಜಖಂಗೊಂಡಿದೆ. ಸ್ಥಳಕ್ಕೆ‌ ನಗರಸಭಾ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More