ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಕಿರಣ್ ಹನುಮಂತ್​ ಮಾದಾರ್

Updated on: Jul 26, 2024 | 10:19 PM

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುರತ್ಕಲ್​ನ ಕಾಟಿಪಳ್ಳ, ಕೃಷ್ಣಾಪುರ ಭಾಗದಲ್ಲಿ ಮಳೆಯ ಜೊತೆಗೆ ಸುಂಟರಗಾಳಿ ಬೀಸಿದ್ದು, ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಜೊತೆಗೆ ವಿದ್ಯುತ್ ಕಂಬ ಹಾಗೂ ಬೃಹತ್​ ಮರಗಳು ಧರೆಗೆ ಉರುಳಿದೆ. ಭಯಾನಕ ಸುಂಟರಗಾಳಿಯ ದೃಶ್ಯ, ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ದಕ್ಷಿಣ ಕನ್ನಡ, ಜು.26: ಕರ್ನಾಟಕದ ಹಲವೆಡೆ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿದೆ. ಅದರಂತೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುರತ್ಕಲ್​ನ ಕಾಟಿಪಳ್ಳ, ಕೃಷ್ಣಾಪುರ ಭಾಗದಲ್ಲಿ ಮಳೆಯ ಜೊತೆಗೆ ಸುಂಟರಗಾಳಿ ಬೀಸಿದ್ದು, ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಜೊತೆಗೆ ವಿದ್ಯುತ್ ಕಂಬ ಹಾಗೂ ಬೃಹತ್​ ಮರಗಳು ಧರೆಗೆ ಉರುಳಿದೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಬಿರುಗಾಳಿ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಇನ್ನು ಭಯಾನಕ ಸುಂಟರಗಾಳಿಯ ದೃಶ್ಯ, ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೆ ಭಾರಿ ಮಳೆಯಿಂದಾಗಿ ಮಂಗಳೂರು ಬಳಿ ಮನೆ ಕುಸಿತವಾಗಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ದುರಂತ ತಪ್ಪಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.