AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕುರುಕ್ಷೇತ್ರದಲ್ಲಿ ಕುಮಾರಸ್ವಾಮಿಯವರದ್ದು ಅರ್ಜುನನ ಪಾತ್ರ: ಅನಿತಾ ಕುಮಾರಸ್ವಾಮಿ

ಚುನಾವಣಾ ಕುರುಕ್ಷೇತ್ರದಲ್ಲಿ ಕುಮಾರಸ್ವಾಮಿಯವರದ್ದು ಅರ್ಜುನನ ಪಾತ್ರ: ಅನಿತಾ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Jan 31, 2023 | 2:27 PM

Share

ಚುನಾವಣಾ ಯದ್ಧದಲ್ಲಿ ತಮ್ಮ ಪತಿ ಹೆಚ್ ಡಿ ಕುಮಾರಸ್ವಾಮಿಯವರ ಪಾತ್ರ ಯಾವುದೆನ್ನುವುದು ಗೊತ್ತಿಲ್ಲ ಅಂತ ಹೇಳಿ ಪ್ರಾಯಶಃ ಅರ್ಜುನನ ಪಾತ್ರ ಇರಬಹುದೆಂದು ಭಾವಿಸುತ್ತೇನೆ ಅಂದರು.

ರಾಮನಗರ: ಅನಿತಾ ಕುಮಾರಸ್ವಾಮಿಯವರು (Anita Kumaraswamy) ಮಾಧ್ಯಮಗಳೊಂದಿಗೆ ಹೆಚ್ಚು ಮಾತಾಡುವುದಿಲ್ಲ, ಸಾರ್ವಜನಿಕ ಸಮಾರಂಭಗಳಲ್ಲೂ ಅವರು ಭಾಷಣ ಮಾಡುವುದು ಬಹಳ ಕಡಿಮೆ ಸಂದರ್ಭಗಳಲ್ಲಿ ಮಾತ್ರ. ರಾಮನಗರದ ಶಾಸಕಿಯಾಗಿರುವ ಅವರು ಮಂಗಳವಾರ ಹಾರೋಹಳ್ಳಿಯಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಮಾತಾಡುವಾಗ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಕುರುಕ್ಷೇತ್ರಕ್ಕೆ ಹೋಲಿಸಿ ಆ ಯುದ್ಧದ ಹಾಗೆ ಚುನಾವಣಾ ಯುದ್ಧದಲ್ಲೂ ಧರ್ಮವೇ ಗೆಲ್ಲಬೇಕು ಮತ್ತು ಗೆಲ್ಲಿಸುವ ವಿಶ್ವಾಸ ಜನರ ಮೇಲಿದೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಅನಿತಾ ಕುಮಾರಸ್ವಾಮಿ, ಚುನಾವಣಾ ಯದ್ಧದಲ್ಲಿ ತಮ್ಮ ಪತಿ ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಪಾತ್ರ ಯಾವುದೆನ್ನುವುದು ಗೊತ್ತಿಲ್ಲ ಅಂತ ಹೇಳಿ ಪ್ರಾಯಶಃ ಅರ್ಜುನನ (Arjun) ಪಾತ್ರ ಇರಬಹುದೆಂದು ಭಾವಿಸುತ್ತೇನೆ ಅಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 31, 2023 02:25 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More