ಸಾಲ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆ(Ujire)ಯಲ್ಲಿ ಕಳೆದ ಎರಡು ದಿನಗಳ ಹಿಂದೆ ಸಾಲ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆ ಆರೋಪಿ ಈ ಹಿಂದೆ ಬೆಳ್ತಂಗಡಿ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ್ದ ಎಂದು ಕೂಡ ಕೇಳಿಬಂದಿದೆ.
ದಕ್ಷಿಣ ಕನ್ನಡ, ಜೂ.29: ಸಾಲ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಉಜಿರೆ(Ujire)ಯಲ್ಲಿ ಎರಡು ದಿನದ ಹಿಂದೆ ನಡೆದಿದೆ. ಧರ್ಮಸ್ಥಳದ ರೂಪಾ ಎಂಬ ಮಹಿಳೆ, ನವೀನ್ ಕನ್ಯಾಡಿ ಎಂಬಾತನಿಗೆ 7 ಲಕ್ಷ ರೂ ಸಾಲ ನೀಡಿದ್ದರು. ಅದೇ ಹಣವನ್ನು ವಾಪಸ್ ಕೇಳಿದ್ದಕ್ಕೆ ಮಹಿಳೆ ರೂಪಾ ಮೇಲೆ ಬಟ್ಟೆ ಅಂಗಡಿಗೆ ನುಗ್ಗಿ ಬಿಜೆಪಿ ಕಾರ್ಯಕರ್ತ ಹಾಗೂ ಹೂವಿನ ವ್ಯಾಪಾರಿಯಾದ ನವೀನ್ ಹಲ್ಲೆ ಮಾಡಿದ್ದಾನೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೂಪಾ
ಉಜಿರೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ಧರ್ಮಸ್ಥಳದ ಮಹಿಳೆ ರೂಪಾ, ಇದೀಗ ಗಾಯಗೊಂಡು ಉಜಿರೆಯ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ನವೀನ್ ಕನ್ಯಾಡಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಹಿಂದೆ ಕೂಡ ನವೀನ್, ಬೆಳ್ತಂಗಡಿ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ್ದ ಎಂದು ಕೇಳಿಬಂದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!
