ಎತ್ತುಗಳಿಂದ 6 ಗಂಟೆಯಲ್ಲೇ 28 ಎಕರೆ ಜಮೀನಿನಲ್ಲಿ ಕುಂಟೆ ಹೊಡೆದು ಸಾಧನೆ

ವಿಜಯಪುರ ತಾಲೂಕಿನ ಗುಗದಡ್ಡಿ ಗ್ರಾಮದ ರೈತ ಬೀರಪ್ಪ ರೇಬಿನಾಳ ಅವರು ಸಾಕಿದ್ದ ಎತ್ತುಗಳಿಂದ ಯುವ ರೈತರಾದ ಮಾಳಪ್ಪ ಬಿರಾದಾರ ಹಾಗೂ ಬಸವರಾಜ ಕಣ್ಮಿನಿ ಕೇವಲ 6 ಗಂಟೆಗಳ ಅವಧಿಯಲ್ಲಿ 28 ಎಕರೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ ಬೆಳೆಯ ಮದ್ಯದಲ್ಲಿ ಕುಂಟೆ ಹೊಡೆದು ಸಾಧನೆ ಮಾಡಿದ್ದಾರೆ.

ಎತ್ತುಗಳಿಂದ 6 ಗಂಟೆಯಲ್ಲೇ 28 ಎಕರೆ ಜಮೀನಿನಲ್ಲಿ ಕುಂಟೆ ಹೊಡೆದು ಸಾಧನೆ
|

Updated on: Aug 09, 2024 | 8:52 PM

ವಿಜಯಪುರ, ಆ.09: ಜಾನುವಾರುಗಳು ರೈತನ ಮಿತ್ರ, ಯಾಂತ್ರೀಕರಣವಾದ ಇಂದಿನ ಕೃಷಿ ಪದ್ದತಿಯಲ್ಲಿ ಜಾನುವಾರುಗಳೇ ಮಾಯವಾಗಿವೆ. ಎತ್ತು ಹೋರಿಗಳನ್ನು ಕೃಷಿಚಟುವಟಿಗಳಿಗೆ ಬಳಕೆ ಮಾಡಿಕೊಳ್ಳುವುದೂ ಸಹ ಮಾಯವಾಗುತ್ತಿವೆ. ಎಲ್ಲ ರೀತಿಯ ಕೃಷಿ ಕೆಲಸ ಕಾರ್ಯಗಳು ಇಂದು ಯಂತ್ರಗಳ ಮೂಲಕ ಮಾಡಲಾಗುತ್ತಿದೆ. ಇಷ್ಟರ ಮಧ್ಯೆಯೂ ಅಲ್ಲಲ್ಲಿ ರೈತರು ಕೃಷಿ ಕೆಲಸ ಕಾರ್ಯಗಳಿಗೆ ಎತ್ತುಗಳನ್ನು ಹೋರಿಗಳನ್ನು ಬಳಕೆ ಮಾಡುತ್ತಾರೆ. ಸ್ವಂತ ಮಕ್ಕಳಂತೆ ಎತ್ತು ಹೋರಿಗಳನ್ನು ಸಾಕಿ ಸಲುಹುತ್ತಾರೆ. ಇದೀಗ ಹೀಗೆ ಸಾಕಿದ ಎತ್ತುಗಳ ಮೂಲಕ ಜಿಲ್ಲೆಯಲ್ಲಿ ರೈತರು ಸಾಧನೆ ಮಾಡಿದ್ದಾರೆ. ಹೌದು, ವಿಜಯಪುರ ತಾಲೂಕಿನ ಗುಗದಡ್ಡಿ ಗ್ರಾಮದ ರೈತ ಬೀರಪ್ಪ ರೇಬಿನಾಳ ಅವರು ಸಾಕಿದ್ದ ಎತ್ತುಗಳಿಂದ ಯುವ ರೈತರಾದ ಮಾಳಪ್ಪ ಬಿರಾದಾರ ಹಾಗೂ ಬಸವರಾಜ ಕಣ್ಮಿನಿ ಕೇವಲ 6 ಗಂಟೆಗಳ ಅವಧಿಯಲ್ಲಿ 28 ಎಕರೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ ಬೆಳೆಯ ಮದ್ಯದಲ್ಲಿ ಕುಂಟೆ ಹೊಡೆದು ಸಾಧನೆ ಮಾಡಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ತೊಗರಿ ಬೆಳೆಯ ಮಧ್ಯೆ ಕುಂಟೆ ಹೊಡೆಯಲು ಆರಂಭಿಸಿದ್ದ ಮಾಳಪ್ಪ ಬಿರಾದಾರ ಹಾಗೂ ಬಸವರಾಜ ಕಣ್ಮಿನಿ, ಕೇವಲ 6 ಗಂಟೆಯಲ್ಲೇ 28 ಎಕರೆ ಜಮೀನನಲ್ಲಿ ಕುಂಟೆಯನ್ನು ಹೊಡೆಯುವುದನ್ನು ಮುಗಿಸಿದ್ದಾರೆ. ಎತ್ತುಗಳ ಸಾಧನೆ ಹಾಗೂ ಯುವ ರೈತರಾದ ಮಾಳಪ್ಪ ಬಿರಾದಾರ ಹಾಗೂ ಬಸವರಾಜ ಕಣ್ಮಿನಿ ಸಾಧನೆಗೆ ಗ್ರಾಮದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎತ್ತುಗಳೊಂದಿಗೆ ಮಾಳಪ್ಪ ಹಾಗೂ ಬಸವರಾಜರನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿ ಗೌರವಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್