Mangalore News: ಸೌಜನ್ಯ ಕೇಸ್ ಮರುತನಿಖೆಗೆ ಹೆಚ್ಚಾದ ಆಗ್ರಹ; ಮಂಗಳೂರಲ್ಲಿ ಪ್ರತಿಕ್ರಿಯಿಸದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 01, 2023 | 1:22 PM

ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಸೌಜನ್ಯ ಕೇಸ್ ಕುರಿತು ಮಾತನಾಡಿದ್ದಾರೆ.

ಮಂಗಳೂರು, ಆ.1: ಇಂದು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ‘ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು. ಅವರ ಪೋಷಕರು ‌ಮರು ತನಿಖೆಗೆ ಮನವಿ ಮಾಡಿದ್ದಾರೆ ಎಂದರು. ‘ಮಂಗಳೂರು ಏರ್​ಪೋರ್ಟ್ನಲ್ಲಿ ಮಾತನಾಡಿದ ಸಿಎಂ ‘ಕಾನೂನು ಪ್ರಕಾರ ಏನಾಗಬೇಕು ಎಂದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾನು ಲಾಯರ್ ಆಗಿ ಹೇಳೋದಾದ್ರೆ, ಇದರ ಬಗ್ಗೆ ಹೈಕೋರ್ಟ್​ಗೆ ಅಪೀಲ್ ಹೋಗಬೇಕು. ಅವರ ಪೋಷಕರು ಜಡ್ಜ್ ಮೆಂಟ್ ಕಾಪಿ ತಂದು ಕೊಟ್ಟಿದ್ದಾರೆ. ನಾನು ಸಿಬಿಐ ಕೋರ್ಟ್ ಜಡ್ಜ್​ಮೆಂಟ್ ನೋಡಿಲ್ಲ. ಅದರ ಜಡ್ಜ್​ಮೆಂಟ್ ಓದಿ ಅಪೀಲ್​ಗೆ ಅವಕಾಶ ಇದ್ಯಾ ನೋಡುತ್ತೇನೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Tue, 1 August 23

Follow us on