IND vs NZ: ಅದೃಷ್ಟ ಕೈಕೊಟ್ಟಾಗ ಹೀಗೆಲ್ಲ ಆಗುತ್ತೆ; ಬ್ಯಾಡ್ ಲಕ್ ರೋಹಿತ್ ಶರ್ಮಾ

IND vs NZ: ಅದೃಷ್ಟ ಕೈಕೊಟ್ಟಾಗ ಹೀಗೆಲ್ಲ ಆಗುತ್ತೆ; ಬ್ಯಾಡ್ ಲಕ್ ರೋಹಿತ್ ಶರ್ಮಾ
|

Updated on: Oct 18, 2024 | 4:34 PM

Rohit Sharma: ಬೆಂಗಳೂರು ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ ಒಂದಂಕಿಗೆ ಸುಸ್ತಾಗಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಎರಡನೇ ಇನ್ನಿಂಗ್ಸ್​ನಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಂಕಷ್ಟದಲ್ಲಿದ್ದ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆದರೆ ಅರ್ಧಶತಕ ಸಿಡಿಸಿದ ಬೆನ್ನಲ್ಲೇ ರೋಹಿತ್ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದರು.

ಬೆಂಗಳೂರು ಟೆಸ್ಟ್‌ನಲ್ಲಿ ಕಿವೀಸ್ ತಂಡವನ್ನು 402 ರನ್​ಗಳಿಗೆ ಆಲೌಟ್ ಮಾಡಿದ್ದ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ದಿಟ್ಟ ಹೋರಾಟ ನೀಡುತ್ತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 46 ರನ್​ಗಳಿಗೆ ಆಲೌಟ್ ಆಗಿದ್ದ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ. ತಂಡದ ಪರ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ರೋಹಿತ್ ಶರ್ಮಾ ಮೊದಲ ವಿಕೆಟ್​ಗೆ 72 ರನ್​ಗಳ ಜೊತೆಯಾಟ ನೀಡಿದರು. ಈ ವೇಳೆ ನಾಯಕ ರೋಹಿತ್ ಶರ್ಮಾ ಭರ್ಜರಿ ಅರ್ಧಶತಕ ಕೂಡ ಬಾರಿಸಿದರು. ಹಿಟ್‌ಮ್ಯಾನ್ 63 ಎಸೆತಗಳಲ್ಲಿ 8 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದರು. ಆದರೆ ಅರ್ಧಶತಕ ಸಿಡಿಸಿದ ಕೂಡಲೇ ರೋಹಿತ್ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದರು.

ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್

ಭಾರತದ ಇನ್ನಿಂಗ್ಸ್​ನ 22ನೇ ಓವರ್​ ಬೌಲ್ ಮಾಡಿದ ಎಜಾಜ್ ಪಟೇಲ್ ಅವರ ಎಸೆತವನ್ನು ರೋಹಿತ್ ಡಿಫೆಂಡ್ ಮಾಡಿಕೊಂಡರು. ಆದರೆ ರೋಹಿತ್ ಶರ್ಮಾ ಅವರ ಬ್ಯಾಟ್‌ಗೆ ತಗುಲಿ ಕೆಳಕ್ಕೆ ಬಿದ್ದ ಚೆಂಡು ಆ ಬಳಿಕ ವಿಕೆಟ್​ನತ್ತ ಹೋಗಲಾರಂಭಿಸಿತು. ಈ ವೇಳೆ ರೋಹಿತ್ ಚೆಂಡನ್ನು ನೋಡುತ್ತಿದ್ದರೂ ಅದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ. ಸ್ವಲ್ಪ ಸಮಯದೊಳಗೆ ಚೆಂಡು ವಿಕೆಟ್‌ಗೆ ಬಡಿದು ರೋಹಿತ್ ಬೌಲ್ಡ್ ಆದರು. ಈ ರೀತಿ ವಿಕೆಟ್ ಕಳೆದುಕೊಂಡ ರೋಹಿತ್ ನಿರಾಸೆಯಿಂದ ಪೆವಿಲಿಯನ್​ಗೆ ಮರಳಿದರು. ಇದೀಗ ರೋಹಿತ್ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Follow us
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ