ಪ್ರೆಸಿಡೆನ್ಸಿ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಬಿಡಿಎ ಮಾಜಿ ಅಧ್ಯಕ್ಷ ರಾಕೇಶ್ ಸಿಂಗ್​ ಧ್ವಜಾರೋಹಣ

Updated on: Aug 15, 2024 | 5:30 PM

ಬೆಂಗಳೂರಿನ ಪ್ರೆಸಿಡೆನ್ಸಿ ಯೂನಿವರ್ಸಿಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದ್ದು, ಬಿಡಿಎ ಮಾಜಿ ಅಧ್ಯಕ್ಷ ರಾಕೇಶ್ ಸಿಂಗ್​ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶವನ್ನು ಉನ್ನತಮಟ್ಟಕ್ಕೇರಿಸಬೇಕೆಂದು ಕರೆ ನೀಡಿದ್ದಾರೆ. ಪ್ರೆಸಿಡೆನ್ಸಿ ವಿಶ್ವ ವಿದ್ಯಾನಿಲಯದ ಕುಲಪತಿ ಡಾ. ನಿಸಾರ್ ಅಹ್ಮದ್ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಬೆಂಗಳೂರು, ಆಗಸ್ಟ್​ 15: ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ (Independence Day)
ಸಂಭ್ರಮ-ಸಡಗರ ಗರಿಗೆದರಿದೆ. ಸ್ವಾತಂತ್ರ್ಯೋತ್ಸವದ ಹಬ್ಬವನ್ನ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದೆ. ಇಂದು ನಗರದ ಪ್ರೆಸಿಡೆನ್ಸಿ ಯೂನಿವರ್ಸಿಟಿಯಲ್ಲಿ ಕೂಡ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದ್ದು, ಬಿಡಿಎ ಮಾಜಿ ಅಧ್ಯಕ್ಷ ರಾಕೇಶ್ ಸಿಂಗ್ (Rakesh Singh) ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶವನ್ನು ಉನ್ನತಮಟ್ಟಕ್ಕೇರಿಸಬೇಕೆಂದು ಕರೆ ನೀಡಿದ್ದಾರೆ. ಪ್ರೆಸಿಡೆನ್ಸಿ ವಿಶ್ವ ವಿದ್ಯಾನಿಲಯದ ಕುಲಪತಿ ಡಾ. ನಿಸಾರ್ ಅಹ್ಮದ್ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More