AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ‘ಹೌದು ಕಳೆದ 2-3 ವರ್ಷಗಳು..’ ಸರಣಿ ಶ್ರೇಷ್ಠ ಗೆದ್ದ ಬಳಿಕ ಕಿಂಗ್ ಕೊಹ್ಲಿ ಹೇಳಿದ್ದೇನು?

Virat Kohli: ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ, ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡಿತು. ಸರಣಿಶ್ರೇಷ್ಠ ವಿರಾಟ್ ಕೊಹ್ಲಿ (135, 102, 65*) ಭರ್ಜರಿ ಪ್ರದರ್ಶನ ನೀಡಿದರು. ಈ ಗೆಲುವು, ವಿಶೇಷವಾಗಿ ತಮ್ಮ ಹೊಸ ಬ್ಯಾಟಿಂಗ್ ಶೈಲಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಕೊಹ್ಲಿ ಹರ್ಷ ವ್ಯಕ್ತಪಡಿಸಿದರು. ಇದು ತಂಡಕ್ಕೆ ಇನ್ನಷ್ಟು ಪ್ರಯೋಜನ ನೀಡಲಿದೆ ಎಂದರು.

ಪೃಥ್ವಿಶಂಕರ
|

Updated on:Dec 06, 2025 | 10:37 PM

Share
ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೋತಿದ್ದ ಟೀಂ ಇಂಡಿಯಾ ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಂಡಿದೆ. ಟೀಂ ಇಂಡಿಯಾದ ಈ ಸರಣಿ ಗೆಲುವಿನಲ್ಲಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಪ್ರಮುಖ ಪಾತ್ರವಹಿಸಿದರು.

ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೋತಿದ್ದ ಟೀಂ ಇಂಡಿಯಾ ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಂಡಿದೆ. ಟೀಂ ಇಂಡಿಯಾದ ಈ ಸರಣಿ ಗೆಲುವಿನಲ್ಲಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಪ್ರಮುಖ ಪಾತ್ರವಹಿಸಿದರು.

1 / 6
ಸರಣಿ ಮೂರು ಪಂದ್ಯಗಳಲ್ಲಿ ಕ್ರಮವಾಗಿ 135, 102 ಹಾಗೂ ಅಜೇಯ 65 ರನ್ ಬಾರಿಸಿದ ಕೊಹ್ಲಿ ತಂಡವನ್ನು ಸರಣಿ ಗೆಲುವಿನತ್ತ ಮುನ್ನಡೆಸಿದರು. ಈ ಪ್ರದರ್ಶನದ ಫಲವಾಗಿ ವಿರಾಟ್​ ಕೊಹ್ಲಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದು ವಿರಾಟ್ ಅವರ 12 ನೇ ಏಕದಿನ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿದೆ. ಇನ್ನು ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕೊಹ್ಲಿ ಏನು ಹೇಳಿದರು ಎಂಬುದನ್ನು ನೋಡುವುದಾದರೆ..

ಸರಣಿ ಮೂರು ಪಂದ್ಯಗಳಲ್ಲಿ ಕ್ರಮವಾಗಿ 135, 102 ಹಾಗೂ ಅಜೇಯ 65 ರನ್ ಬಾರಿಸಿದ ಕೊಹ್ಲಿ ತಂಡವನ್ನು ಸರಣಿ ಗೆಲುವಿನತ್ತ ಮುನ್ನಡೆಸಿದರು. ಈ ಪ್ರದರ್ಶನದ ಫಲವಾಗಿ ವಿರಾಟ್​ ಕೊಹ್ಲಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದು ವಿರಾಟ್ ಅವರ 12 ನೇ ಏಕದಿನ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿದೆ. ಇನ್ನು ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕೊಹ್ಲಿ ಏನು ಹೇಳಿದರು ಎಂಬುದನ್ನು ನೋಡುವುದಾದರೆ..

2 / 6
ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ನಂತರ ಮಾತನಾಡಿದ ವಿರಾಟ್ ಕೊಹ್ಲಿ, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸರಣಿಯಲ್ಲಿ ನಾನು ಆಡಿದ ರೀತಿ ನನಗೆ ಸಂತೋಷ ನೀಡಿದೆ. ಈಗ ನನ್ನ ಮನಸ್ಸಿನಲ್ಲಿ ಒಂದು ರೀತಿಯ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇನೆ. ಹೌದು ಕಳೆದ 2-3 ವರ್ಷಗಳಲ್ಲಿ ನಾನು ಈ ರೀತಿ ಬ್ಯಾಟಿಂಗ್ ಮಾಡಿಲ್ಲ.

ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ನಂತರ ಮಾತನಾಡಿದ ವಿರಾಟ್ ಕೊಹ್ಲಿ, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸರಣಿಯಲ್ಲಿ ನಾನು ಆಡಿದ ರೀತಿ ನನಗೆ ಸಂತೋಷ ನೀಡಿದೆ. ಈಗ ನನ್ನ ಮನಸ್ಸಿನಲ್ಲಿ ಒಂದು ರೀತಿಯ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇನೆ. ಹೌದು ಕಳೆದ 2-3 ವರ್ಷಗಳಲ್ಲಿ ನಾನು ಈ ರೀತಿ ಬ್ಯಾಟಿಂಗ್ ಮಾಡಿಲ್ಲ.

3 / 6
ನಾನು ಮಧ್ಯಮ ಕ್ರಮಾಂಕದಲ್ಲಿ ಈ ರೀತಿಯ ಪ್ರದರ್ಶನ ನೀಡುವುದು ತಂಡಕ್ಕೆ ದೊಡ್ಡ ಪ್ರಯೋಜನವನ್ನು ನೀಡುತ್ತದೆ ಎಂದು ನನಗೆ ತಿಳಿದಿದೆ. ಇದು ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ನನ್ನನ್ನು ನಿಭಾಯಿಸಲು ಮತ್ತು ಪಂದ್ಯವನ್ನು ತಂಡದ ಪರವಾಗಿ ತಿರುಗಿಸಲು ನನಗೆ ಅವಕಾಶ ನೀಡುತ್ತದೆ ಎಂದಿದ್ದಾರೆ.

ನಾನು ಮಧ್ಯಮ ಕ್ರಮಾಂಕದಲ್ಲಿ ಈ ರೀತಿಯ ಪ್ರದರ್ಶನ ನೀಡುವುದು ತಂಡಕ್ಕೆ ದೊಡ್ಡ ಪ್ರಯೋಜನವನ್ನು ನೀಡುತ್ತದೆ ಎಂದು ನನಗೆ ತಿಳಿದಿದೆ. ಇದು ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ನನ್ನನ್ನು ನಿಭಾಯಿಸಲು ಮತ್ತು ಪಂದ್ಯವನ್ನು ತಂಡದ ಪರವಾಗಿ ತಿರುಗಿಸಲು ನನಗೆ ಅವಕಾಶ ನೀಡುತ್ತದೆ ಎಂದಿದ್ದಾರೆ.

4 / 6
ಇನ್ನು ಈ ಸರಣಿಯಲ್ಲಿ ಕೊಹ್ಲಿ ಸರಾಗವಾಗಿ ಸಿಕ್ಸರ್​ಗಳನ್ನು ಹೊಡೆಯುವುದು ಕಂಡುಬಂತು. ಈ ಬಗ್ಗೆ ಮಾತನಾಡಿದ ಕೊಹ್ಲಿ, ‘ನೀವು 15-16 ವರ್ಷಗಳ ಕಾಲ ಆಡುವಾಗ, ಕೆಲವೊಮ್ಮೆ ನೀವು ನಿಮ್ಮನ್ನು ಅನುಮಾನಿಸುತ್ತೀರಿ, ವಿಶೇಷವಾಗಿ ಬ್ಯಾಟ್ಸ್‌ಮನ್ ಆಗಿ, ಏಕೆಂದರೆ ನೀವು ಮಾಡುವ ಒಂದು ತಪ್ಪು ನಿಮ್ಮನ್ನು ಪೆವಿಲಿಯನ್​ಗೆ ಕಳುಹಿಸಬಹುದು. ಆದರೆ ಈ ಪ್ರಯಾಣವು ನಿಮ್ಮನ್ನು ಸುಧಾರಿಸುವುದರ ಜೊತೆಗೆ ಇದು ನಿಮ್ಮ ಮನೋಧರ್ಮ ಮತ್ತು ನಿಮ್ಮ ಆಲೋಚನೆ ಎರಡನ್ನೂ ಬದಲಾಯಿಸುತ್ತದೆ. ನಾನು ಮುಕ್ತವಾಗಿ ಆಡಿದಾಗ, ನಾನು ದೊಡ್ಡ ಹೊಡೆತಗಳನ್ನು ಸಹ ಹೊಡೆಯಬಲ್ಲೆ ಎಂದು ನನಗೆ ತಿಳಿದಿದೆ ಎಂದರು.

ಇನ್ನು ಈ ಸರಣಿಯಲ್ಲಿ ಕೊಹ್ಲಿ ಸರಾಗವಾಗಿ ಸಿಕ್ಸರ್​ಗಳನ್ನು ಹೊಡೆಯುವುದು ಕಂಡುಬಂತು. ಈ ಬಗ್ಗೆ ಮಾತನಾಡಿದ ಕೊಹ್ಲಿ, ‘ನೀವು 15-16 ವರ್ಷಗಳ ಕಾಲ ಆಡುವಾಗ, ಕೆಲವೊಮ್ಮೆ ನೀವು ನಿಮ್ಮನ್ನು ಅನುಮಾನಿಸುತ್ತೀರಿ, ವಿಶೇಷವಾಗಿ ಬ್ಯಾಟ್ಸ್‌ಮನ್ ಆಗಿ, ಏಕೆಂದರೆ ನೀವು ಮಾಡುವ ಒಂದು ತಪ್ಪು ನಿಮ್ಮನ್ನು ಪೆವಿಲಿಯನ್​ಗೆ ಕಳುಹಿಸಬಹುದು. ಆದರೆ ಈ ಪ್ರಯಾಣವು ನಿಮ್ಮನ್ನು ಸುಧಾರಿಸುವುದರ ಜೊತೆಗೆ ಇದು ನಿಮ್ಮ ಮನೋಧರ್ಮ ಮತ್ತು ನಿಮ್ಮ ಆಲೋಚನೆ ಎರಡನ್ನೂ ಬದಲಾಯಿಸುತ್ತದೆ. ನಾನು ಮುಕ್ತವಾಗಿ ಆಡಿದಾಗ, ನಾನು ದೊಡ್ಡ ಹೊಡೆತಗಳನ್ನು ಸಹ ಹೊಡೆಯಬಲ್ಲೆ ಎಂದು ನನಗೆ ತಿಳಿದಿದೆ ಎಂದರು.

5 / 6
ಇದರ ಜೊತೆಗೆ ಈ ಸರಣಿಯಲ್ಲಿ ತಮ್ಮ ಅತ್ಯುತ್ತಮ ಇನ್ನಿಂಗ್ಸ್ ಯಾವುದು ಎಂಬುದನ್ನು ವಿವರಿಸಿದ ಕೊಹ್ಲಿ, ‘ಆಸ್ಟ್ರೇಲಿಯಾ ನಂತರ ನಾನು ಯಾವುದೇ ಪಂದ್ಯವನ್ನು ಆಡದ ಕಾರಣ ರಾಂಚಿಯಲ್ಲಿ ನಡೆದ ಮೊದಲ ಪಂದ್ಯ ನನಗೆ ತುಂಬಾ ವಿಶೇಷವಾಗಿತ್ತು. ಆ ದಿನ ನನಗೆ ವಿಭಿನ್ನವಾದ ಚೈತನ್ಯ ಮೂಡಿತು. ಈ ಮೂರು ಪಂದ್ಯಗಳು ನನಗೆ ತುಂಬಾ ವಿಶೇಷವಾದವು, ಮತ್ತು ಅದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದರು.

ಇದರ ಜೊತೆಗೆ ಈ ಸರಣಿಯಲ್ಲಿ ತಮ್ಮ ಅತ್ಯುತ್ತಮ ಇನ್ನಿಂಗ್ಸ್ ಯಾವುದು ಎಂಬುದನ್ನು ವಿವರಿಸಿದ ಕೊಹ್ಲಿ, ‘ಆಸ್ಟ್ರೇಲಿಯಾ ನಂತರ ನಾನು ಯಾವುದೇ ಪಂದ್ಯವನ್ನು ಆಡದ ಕಾರಣ ರಾಂಚಿಯಲ್ಲಿ ನಡೆದ ಮೊದಲ ಪಂದ್ಯ ನನಗೆ ತುಂಬಾ ವಿಶೇಷವಾಗಿತ್ತು. ಆ ದಿನ ನನಗೆ ವಿಭಿನ್ನವಾದ ಚೈತನ್ಯ ಮೂಡಿತು. ಈ ಮೂರು ಪಂದ್ಯಗಳು ನನಗೆ ತುಂಬಾ ವಿಶೇಷವಾದವು, ಮತ್ತು ಅದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದರು.

6 / 6

Published On - 10:35 pm, Sat, 6 December 25

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್