Operation Sindoor; ನಾಗರಿಕರಿಗೆ ತೊಂದರೆಯಾಗದಂತೆ ಕೇವಲ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ: ಡಾ ಮಂಜುನಾಥ್

ಅರುಣ್​ ಕುಮಾರ್​ ಬೆಳ್ಳಿ

Updated on: May 07, 2025 | 7:53 PM

ಭಾರತವು ಪಾಕಿಸ್ತಾನದ ಮೇಲೆ ಯುದ್ಧ ಸಾರಿಲ್ಲ, ಇಂದು ಬೆಳಗ್ಗೆ ನಡೆದಿದ್ದು ಉಗ್ರರ ನೆಲೆಗಳ ಮೇಲೆ ದಾಳಿ, ಸಾಂಪ್ರದಾಯಿಕ ಯುದ್ಧ ಶುರುವಾಗಿಲ್ಲ, ವಿಶ್ವದ ಅತಿ ದೊಡ್ಡ ಸಮಸ್ಯೆಯಾಗಿರುವ ಭಯೋತ್ಪಾದನೆಯನ್ನು ಮಟ್ಟಹಾಕಲು ಭಾರತ ದಿಟ್ಟ ಹೆಜ್ಜೆಯನ್ನಿಟ್ಟಿದೆ, ಭಯೋತ್ಪಾದಕರು ನಿರಂತರವಾಗಿ ಭಾರತವನ್ನು ಕಾಡುತ್ತಿದ್ದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ ಎಂದು ಡಾ ಮಂಜುನಾಥ್ ಹೇಳಿದರು.

ರಾಮನಗರ, ಮೇ 7: ಭಾರತದ ರಕ್ಷಣಾ ವ್ಯವಸ್ಥೆಯಲ್ಲಿ ಇವತ್ತು ಐತಿಹಾಸಿಕ ದಿನ, ಪಾಕಿಸ್ತಾನದಲ್ಲಿದ್ದ 9 ಉಗ್ರರ ತಾಣಗಳನ್ನು ಭಾರತದ ವಾಯುಸೇನೆ (Indian Air Force) ಟಾರ್ಗೆಟ್ ಮಾಡಿಕೊಂಡು ನೆಲಸಮಗೊಳಿಸಿದೆ, ನಾಗರಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅತ್ಯಂತ ಕರಾರುವಕ್ಕಾಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ ಸಿಎನ್ ಮಂಜುನಾಥ್ ಹೇಳಿದರು. ದಾಳಿ ನಡೆಸುವ ಮೊದಲು ಭಾರತವು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ರಾಜತಾಂತ್ರಿಕ ಹೋರಾಟ ನಡೆಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಶ್ವಾಸ ಗಳಿಸಿಕೊಂಡು ಪಾಕಿಸ್ತಾನವನ್ನು ಐಸೋಲೇಟ್ ಮಾಡಿತು ಮತ್ತು ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತ್ತಿನಲ್ಲಿಡುವ ಮೂಲಕವೂ ಭರ್ಜರಿ ಯಶಕಂಡಿತು ಎಂದು ಮಂಜುನಾಥ್ ಹೇಳಿದರು.

ಇದನ್ನೂ ಓದಿ:    ಪಾಕಿಸ್ತಾನ ದಾಳಿ ಮಾಡಿದರೆ ಪ್ರತಿದಾಳಿಗೆ ಸಿದ್ಧ; ಜಾಗತಿಕ ರಾಷ್ಟ್ರೀಯ ಭದ್ರತಾ ಸಲಹೆಗಾರರಿಗೆ ಅಜಿತ್ ದೋವಲ್ ಮಾಹಿತಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.