India-Pakistan War Updates; ಬೆಳಗಿನ ಹೊತ್ತಲ್ಲೇ ರಜೌರಿ ಬಳಿಯ ಪಾಕಿಸ್ತಾನಿ ಪೋಸ್ಟ್ಗಳು ಭಾರತೀಯ ಸೇನೆಯಿಂದ ಧ್ವಂಸ!
ಟಿವಿ9 ಜೊತೆ ಮಾತಾಡಿರುವ ಯುವಾ ಬ್ರಿಗೇಡ್ ಸಂಸ್ಥಾಪಕ ಮತ್ತು ಚಿಂತಕ ಚಕ್ರವರ್ತಿ ಸೂಲಿಬೆಲೆ, ಪಾಕಿಸ್ತಾನದ ಮೇಲೆ ಆಕ್ರಮಣ ನಡೆಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಿಂದ ತಯಾರಿ ಮಾಡಿಕೊಳ್ಳುತ್ತಿದ್ದರು, ರಫೇಲ್ ಯುದ್ಧ ವಿಮಾನ ಖರೀದಿ, ಎಸ್-400 ಏರ್ ಡಿಫೆನ್ಸ್ ಸಾಧನ ಅಳವಡಿಕೆ ಮೊದಲಾದವುಗಳನ್ನೆಲ್ಲ ತಯಾರಿ ಮಾಡಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಿದರು.
ಬೆಂಗಳೂರು, ಮೇ 9: ನಾವೆಲ್ಲ ಮನೆಗಳಲ್ಲಿ ಬೆಚ್ಚಗೆ ಮಲಗಿರಬೇಕಾದರೆ, ನಮ್ಮ ಸೇನೆ ಗಡಿಭಾಗದಲ್ಲಿ ಪಾಕಿಸ್ತಾನಿ ಸೇನೆಯನ್ನು, ಉಗ್ರರನ್ನು ಬಗ್ಗು ಬಡಿಯುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್ನಲ್ಲಿ ಇಂದು ಬೆಳಗ್ಗೆ 5.44 ನಿಮಿಷಕ್ಕೆ ಸೇನೆಯು ಪಾಕಿಸ್ತಾನದ ಪೋಸ್ಟ್ ಗಳನ್ನು ಧ್ವಂಸ ಮಾಡಿದೆ. ಪಾಕ್ ಸೇನೆ ಭಾರತದ ಗಡಿಯೊಳಗೆ ನುಗ್ಗಲು ಪ್ರಯತ್ನಿಸಿದಾಗ ಭಾರತೀಯ ಸೇನೆ ದಾಳಿ ನಡೆಸಿದೆ. ಗಡಿಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿರುವುದರಿಂದ ಅಲ್ಲಿ ವಾಸವಾಗಿರುವ ಜನರನ್ನು ಸುರಕ್ಷಿತವಾದ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಭಾರತದ ಏರ್ಪೋರ್ಟ್ ಮತ್ತು ಸ್ಮಾರಕಗಳನ್ನು ಸಂರಕ್ಷಿಸುವ ಕಡೆಯೂ ಭಾರತ ಹೆಚ್ಚಿನ ಗಮನ ನೀಡುತ್ತಿದೆ. ಪಾಕಿಸ್ತಾನದ ಸಂಸತ್ತಿನಲ್ಲಿ ಚುನಾಯಿತ ಸದಸ್ಯರು ಶಹಬಾಜ್ ಶರೀಫ್ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ.
ಇದನ್ನೂ ಓದಿ: 12 ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್ ಸೇನೆ: ಭಾರತ ಹೇಳಿದ್ದೇನು?
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ