AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು; ವಿಡಿಯೋ

ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು; ವಿಡಿಯೋ

ಪೃಥ್ವಿಶಂಕರ
|

Updated on: Apr 28, 2025 | 9:09 PM

R Ashwin Awarded Padma Shri: ಭಾರತೀಯ ಕ್ರಿಕೆಟ್ ತಾರೆ ಆರ್. ಅಶ್ವಿನ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಏಪ್ರಿಲ್ 28 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ನೀಡಿದರು. ಅಶ್ವಿನ್ ಭಾರತೀಯ ಕ್ರಿಕೆಟ್‌ನಲ್ಲಿ ಅಮೋಘ ಸೇವೆ ಸಲ್ಲಿಸಿದ್ದು ಈ ಪ್ರಶಸ್ತಿಯನ್ನು ಪಡೆದ ನಾಲ್ಕನೇ ಕ್ರಿಕೆಟಿಗರಾಗಿದ್ದಾರೆ. ಸಚಿನ್ ತೆಂಡೂಲ್ಕರ್, ಜಹೀರ್ ಖಾನ್ ಮತ್ತು ಗೌತಮ್ ಗಂಭೀರ್ ಅವರ ನಂತರ ಅಶ್ವಿನ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಕಳೆದ ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್​. ಅಶ್ವಿನ್ ಪ್ರಸ್ತುತ ಐಪಿಎಲ್‌ನಲ್ಲಿ ಸಿಎಸ್​ಕೆ ತಂಡದ ಪರ ಆಡುತ್ತಿದ್ದಾರೆ. ತಮ್ಮ ಅಮೋಘ ಆಟದಿಂದ ಭಾರತ ಕ್ರಿಕೆಟ್​ ಏಳ್ಗೆಗೆ ಶ್ರಮಿಸಿದ್ದ ಅಶ್ವಿನ್​ರನ್ನು ಕೇಂದ್ರ ಸರ್ಕಾರ ಕೆಲವು ದಿನಗಳ ಹಿಂದೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಇದೀಗ ಏಪ್ರಿಲ್ 28 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ದೊಡ್ಡ ವ್ಯಕ್ತಿಗಳು ಹಾಜರಿದ್ದ ಈ ಸಮಾರಂಭದಲ್ಲಿ ರಾಷ್ಟ್ರಪತಿಯವರಿಂದ ಈ ಗೌರವ ಸ್ವೀಕರಿಸಿದ ಅಶ್ವಿನ್ ಈಗ ಈ ಪ್ರಶಸ್ತಿ ಪಡೆದ 4ನೇ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಅಶ್ವಿನ್​ಗಿಂತ ಮೊದಲು, ಸಚಿನ್ ತೆಂಡೂಲ್ಕರ್, ಜಹೀರ್ ಖಾನ್ ಮತ್ತು ಗೌತಮ್ ಗಂಭೀರ್ ಅವರಂತಹ ಲೆಜೆಂಡರಿ ಆಟಗಾರರು ಸಹ ಈ ಗೌರವವನ್ನು ಪಡೆದಿದ್ದರು.