ಆರ್. ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು; ವಿಡಿಯೋ
R Ashwin Awarded Padma Shri: ಭಾರತೀಯ ಕ್ರಿಕೆಟ್ ತಾರೆ ಆರ್. ಅಶ್ವಿನ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಏಪ್ರಿಲ್ 28 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ನೀಡಿದರು. ಅಶ್ವಿನ್ ಭಾರತೀಯ ಕ್ರಿಕೆಟ್ನಲ್ಲಿ ಅಮೋಘ ಸೇವೆ ಸಲ್ಲಿಸಿದ್ದು ಈ ಪ್ರಶಸ್ತಿಯನ್ನು ಪಡೆದ ನಾಲ್ಕನೇ ಕ್ರಿಕೆಟಿಗರಾಗಿದ್ದಾರೆ. ಸಚಿನ್ ತೆಂಡೂಲ್ಕರ್, ಜಹೀರ್ ಖಾನ್ ಮತ್ತು ಗೌತಮ್ ಗಂಭೀರ್ ಅವರ ನಂತರ ಅಶ್ವಿನ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಕಳೆದ ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಪ್ರಸ್ತುತ ಐಪಿಎಲ್ನಲ್ಲಿ ಸಿಎಸ್ಕೆ ತಂಡದ ಪರ ಆಡುತ್ತಿದ್ದಾರೆ. ತಮ್ಮ ಅಮೋಘ ಆಟದಿಂದ ಭಾರತ ಕ್ರಿಕೆಟ್ ಏಳ್ಗೆಗೆ ಶ್ರಮಿಸಿದ್ದ ಅಶ್ವಿನ್ರನ್ನು ಕೇಂದ್ರ ಸರ್ಕಾರ ಕೆಲವು ದಿನಗಳ ಹಿಂದೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಇದೀಗ ಏಪ್ರಿಲ್ 28 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ದೊಡ್ಡ ವ್ಯಕ್ತಿಗಳು ಹಾಜರಿದ್ದ ಈ ಸಮಾರಂಭದಲ್ಲಿ ರಾಷ್ಟ್ರಪತಿಯವರಿಂದ ಈ ಗೌರವ ಸ್ವೀಕರಿಸಿದ ಅಶ್ವಿನ್ ಈಗ ಈ ಪ್ರಶಸ್ತಿ ಪಡೆದ 4ನೇ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಅಶ್ವಿನ್ಗಿಂತ ಮೊದಲು, ಸಚಿನ್ ತೆಂಡೂಲ್ಕರ್, ಜಹೀರ್ ಖಾನ್ ಮತ್ತು ಗೌತಮ್ ಗಂಭೀರ್ ಅವರಂತಹ ಲೆಜೆಂಡರಿ ಆಟಗಾರರು ಸಹ ಈ ಗೌರವವನ್ನು ಪಡೆದಿದ್ದರು.

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
