‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ

Updated on: Sep 22, 2025 | 8:17 PM

ಕನ್ನಡ ಚಿತ್ರರಂಗದ ಪಾಲಿಗೆ ‘ಕಾಂತಾರ’ ಒಂದು ಹೆಮ್ಮೆಯ ಚಿತ್ರ. ಈಗ ಅದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಭಾರತೀಯ ಅಂಚೆ ಇಲಾಖೆಯಿಂದ ಗೌರವ ಸಲ್ಲಿಸಲಾಗಿದೆ. ಈ ಮೊದಲು ಕಾಂತಾರ ಸಿನಿಮಾಗೆ ‘ರಾಷ್ಟ್ರ ಪ್ರಶಸ್ತಿ’ ಬಂದಿತ್ತು. ಈಗ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಲಾಗಿದೆ.

ಕನ್ನಡ ಚಿತ್ರರಂಗದ ಪಾಲಿಗೆ ‘ಕಾಂತಾರ’ ಒಂದು ಹೆಮ್ಮೆಯ ಸಿನಿಮಾ. ಈಗ ಅದರ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಭಾರತೀಯ ಅಂಚೆ (Indian Post) ಇಲಾಖೆಯಿಂದ ಗೌರವ ಸಲ್ಲಿಸಲಾಗಿದೆ. ಈ ಮೊದಲು ಕಾಂತಾರ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈಗ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡುವ ಮೂಲಕ ಗೌರವ ನೀಡಲಾಗಿದೆ. ಅಂಚೆ ಇಲಾಖೆಯ ಸಂದೇಶ್ ಮಹದೇವಪ್ಪ, ಹೆಚ್​​.ಎಂ. ಮಹೇಶ್ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಸುದ್ದಿಗೋಷ್ಠಿಗೆ ಬಂದು ಸ್ಪೆಷಲ್ ಪೋಸ್ಟಲ್ ಕವರ್ ಬಿಡುಗಡೆ ಮಾಡಿದರು. ಈ ವೇಳೆ ನಿರ್ಮಾಪಕ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ (Rishab Shetty) ಭಾಗಿಯಾದರು. ‘ಕಾಯಕವೇ ಕೈಲಾಸ’ ಎಂದು ರಿಷಬ್ ಶೆಟ್ಟಿ ಅವರು ಪೋಸ್ಟ್ ಕಾರ್ಡ್​ ಮೇಲೆ ಆಟೋಗ್ರಾಫ್ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More