ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಕಾಂಗ್ರೆಸ್ನಿಂದ ನಡೆದ ಈ ಪ್ರತಿಭಟನೆ ಮೋದಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಪ್ರತಿಭಟನಾಕಾರರು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಘೋಷಣೆಗಳನ್ನು ಕೂಗಿದರು. 'ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ' ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಕೆಲವು ನಿಮಿಷಗಳ ಕಾಲ ನಡೆಯಿತು. ಕೊನೆಗೆ ಅವರನ್ನು ಒತ್ತಾಯವಾಗಿ ಸಭಾಂಗಣದಿಂದ ಹೊರಗೆ ಕರೆದೊಯ್ಯಲಾಯಿತು.
ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ, ಮೋದಿ ಹಾಗೂ ಟ್ರಂಪ್ ಫೋಟೋಗಳಿರುವ ಅಂಗಡಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಆ ಕಾರ್ಯಕರ್ತರು ಹೇಗೆ ಶೃಂಗಸಭೆಯ ಆವರಣದೊಳಗೆ ಪ್ರತಿಭಟನೆ ನಡೆಸಿದರು, ಈ ವೇಳೆ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ. ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಕಾಂಗ್ರೆಸ್ನಿಂದ ನಡೆದ ಈ ಪ್ರತಿಭಟನೆ ಮೋದಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಪ್ರತಿಭಟನಾಕಾರರು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಘೋಷಣೆಗಳನ್ನು ಕೂಗಿದರು. ‘ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಕೆಲವು ನಿಮಿಷಗಳ ಕಾಲ ನಡೆಯಿತು. ಕೊನೆಗೆ ಅವರನ್ನು ಒತ್ತಾಯವಾಗಿ ಸಭಾಂಗಣದಿಂದ ಹೊರಗೆ ಕರೆದೊಯ್ಯಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Feb 20, 2026 02:51 PM
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

