AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor: ಮೋದಿ ಹೆಸರು ಹೇಳಲೂ ಹೆದರುವ ಹೇಡಿ: ತನ್ನದೇ ದೇಶದ ಪ್ರಧಾನಿ ಬಗ್ಗೆ ಪಾಕ್​ ಸಂಸದ ವ್ಯಂಗ್ಯ

Operation Sindoor: “ಮೋದಿ ಹೆಸರು ಹೇಳಲೂ ಹೆದರುವ ಹೇಡಿ”: ತನ್ನದೇ ದೇಶದ ಪ್ರಧಾನಿ ಬಗ್ಗೆ ಪಾಕ್​ ಸಂಸದ ವ್ಯಂಗ್ಯ

ವಿವೇಕ ಬಿರಾದಾರ
|

Updated on:May 09, 2025 | 1:21 PM

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ, ಭಾರತೀಯ ಸೇನೆ ಆಪರೇಷನ್ ಸಿಂದೂರ್ ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭಾರತೀಯ ಸೇನೆ ಪಾಕಿಸ್ತಾನದ ಹಲವು ಪ್ರದೇಶಗಳ ಮೇಲೆ ಪ್ರತಿದಾಳಿ ನಡೆಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎಂಬ ವರದಿಗಳಿವೆ. ಪಾಕಿಸ್ತಾನದ ಸಂಸತ್‌ನಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.

ಇಸ್ಲಾಮಾಬಾದ್, ಮೇ 09: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ (Pahalgam Terror Attack) ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್​ ಸಿಂದೂರ್ (Operation Sindoor)​ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಗುರುವಾರ ರಾತ್ರಿ ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡಲು ಯತ್ನಿಸಿ ವಿಫಲವಾಗಿದೆ. ಭಾರತ ಕೂಡ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ನೀಡಿದೆ. ಗುರುವಾರ ಮಧ್ಯಾಹ್ನ ಮತ್ತು ತಡರಾತ್ರಿ ಭಾರತೀಯ ಸೇನೆ ಪಾಕಿಸ್ತಾನದ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಭಾರತದ ದಾಳಿಗೆ ಪಾಕಿಸ್ತಾನ ಪದರುಗಟ್ಟಿದೆ. ಭಾರತದ ದಾಳಿಗೆ ಹೆದರಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ವಿಚಾರವಾಗಿ ಪಾಕಿಸ್ತಾನ ಸಂಸದ ಅಲ್ಲಿನ ಸಂಸತ್ತನಲ್ಲಿ ಮಾತನಾಡಿದ್ದು, ಪಾಕಿಸ್ತಾನ ಪ್ರಧಾನಿಯನ್ನು ಹೇಡಿ ಅಂತ ಜರದಿದ್ದಾರೆ. “ನಮ್ಮ ಪ್ರಧಾನಿ ಭಾರತದ ವಿರುದ್ಧ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ” ಅಂತ ಹೇಳಿ ಟಿಪ್ಪು ಸುಲ್ತಾನ್​ ಕೋಟ್​ ಹೇಳಿದ್ದಾರೆ. “ಭಾರತದ ಪ್ರಧಾನಿ ಮೋದಿ ಹೆಸರು ಹೇಳಲು ಸಹಿತ ಹೆದರುವ ಹೇಡಿ ನಿಮ್ಮ ಪ್ರಧಾನಿ ಯೋಧರಿಗೆ ಹೇಗೆ ಧೈರ್ಯ ತುಂಬುತ್ತಾನೆ” ಎಂದು ವಾಗ್ದಾಳಿ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 09, 2025 01:18 PM