ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ

Edited By:

Updated on: Dec 05, 2025 | 10:39 AM

ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯದಿಂದಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ತೀವ್ರವಾಗಿ ಕುಸಿದಿದೆ. ವಿಮಾನಗಳ ರದ್ದತಿಯಿಂದ ಹಲವು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಪರದಾಡುತ್ತಿದ್ದರೆ, ಬೆಂಗಳೂರಿನ ವಿವಿಧೆಡೆ ಸಂಚರಿಸುವ ಬಿಎಂಟಿಸಿ ವಾಯುವಜ್ರ ಮತ್ತು ಕೆಎಸ್ಆರ್​ಟಿಸಿ ಫ್ಲೈ ಬಸ್​ಗಳು ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿ ಓಡುತ್ತಿವೆ.

ಬೆಂಗಳೂರು, ಡಿಸೆಂಬರ್ 5: ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ವಿಮಾನಗಳು ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಒಳಭಾಗದಲ್ಲಿ ಪ್ರಯಾಣಿಕರು ಪರದಾಡುತ್ತಿದ್ದರೆ, ಹೊರಭಾಗದಲ್ಲಿ ಬೆಂಗಳೂರಿನ ವಿವಿಧೆಡೆ ಸಂಚರಿಸುವ ಬಸ್​​ಗಳು ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿವೆ. ವಿಮಾನ ನಿಲ್ದಾಣದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿರುತ್ತಾರೆ. ಆದರೆ, ಕಳೆದ ಮೂರು ದಿನಗಳಿಂದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಬಿಎಂಟಿಸಿ ಮತ್ತು ಕೆಎಸ್ಆರ್​ಟಿಸಿ ಫ್ಲೈಬಸ್​ಗಳ ಆದಾಯ ಸಂಗ್ರಹದಲ್ಲೂ ಭಾರಿ ಕುಸಿತವಾಗಿದೆ.

ವಿಮಾನ ನಿಲ್ದಾಣಕ್ಕೆ ಆಗಮಿಸುವ ಇಂಡಿಗೋ ವಿಮಾನಗಳ ರದ್ದತಿಯೇ ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಬೇರೆ ರಾಜ್ಯಗಳಿಂದ ಬರುವ ಹೆಚ್ಚಿನ ವಿಮಾನಗಳು ಇಂಡಿಗೋ ಆಗಿವೆ. ಇದರಿಂದಾಗಿ ಆಗಮನ ಗೇಟ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ತೀರಾ ವಿರಳವಾಗಿದ್ದು, ಬಸ್ ನಿಲ್ದಾಣಗಳು ಬಣಗುಡುತ್ತಿವೆ. ಸಾಮಾನ್ಯವಾಗಿ 30-40 ಪ್ರಯಾಣಿಕರಿಂದ ತುಂಬುವ ಬಸ್​ಗಳಲ್ಲಿ ಈಗ 10 ಪ್ರಯಾಣಿಕರೂ ಇರುವುದಿಲ್ಲ ಎಂದು ಚಾಲಕರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More