ಇಂಡಿಗೋ ವಿರುದ್ಧ ಸಿಡಿದೆದ್ದ ವಾಟಾಳ್: ಪ್ರಯಾಣಿಕರ ಸಮಸ್ಯೆಗೆ ಧ್ವನಿಯಾದ ಕನ್ನಡಪರ ಹೋರಾಟಗಾರ
ಇಂಡಿಗೋ ಏರ್ಲೈನ್ಸ್ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೀಗಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಏರ್ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ವಿಡಿಯೋ ನೋಡಿ.
ದೇವನಹಳ್ಳಿ, ಡಿಸೆಂಬರ್ 05: ಇಂಡಿಗೋ ಏರ್ಲೈನ್ಸ್ ವಿಮಾನ ವ್ಯತ್ಯಯ ಹಿನ್ನೆಲೆ ನಿನ್ನೆಯಿಂದ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪ್ರಯಾಣಿಕರ ಪರಿಸ್ಥಿತಿ ಅತಂತ್ರವಾಗಿದೆ. ಸದ್ಯ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಏರ್ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲವೆಂದು ಗರಂ ಆದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
