ಇಂಡಿಗೋ ವಿರುದ್ಧ ಸಿಡಿದೆದ್ದ ವಾಟಾಳ್: ಪ್ರಯಾಣಿಕರ ಸಮಸ್ಯೆಗೆ ಧ್ವನಿಯಾದ ಕನ್ನಡಪರ ಹೋರಾಟಗಾರ

Edited By:

Updated on: Dec 05, 2025 | 9:01 PM

ಇಂಡಿಗೋ ಏರ್​ಲೈನ್ಸ್ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೀಗಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಏರ್​ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ವಿಡಿಯೋ ನೋಡಿ.

ದೇವನಹಳ್ಳಿ, ಡಿಸೆಂಬರ್​ 05: ಇಂಡಿಗೋ ಏರ್​ಲೈನ್ಸ್ ವಿಮಾನ ವ್ಯತ್ಯಯ ಹಿನ್ನೆಲೆ ನಿನ್ನೆಯಿಂದ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರ ಪರಿಸ್ಥಿತಿ ಅತಂತ್ರವಾಗಿದೆ. ಸದ್ಯ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಏರ್​ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲವೆಂದು ಗರಂ ಆದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.