‘ಬಡವರ, ಸಾಮಾನ್ಯರ ಪರವಾಗಿ ನನ್ನ ಹೋರಾಟ ಸದಾ ಇರುತ್ತದೆ’; ಇಂದ್ರಜಿತ್ ಲಂಕೇಶ್
‘ಯಾವತ್ತೂ ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ. ಬಡವರು, ದಲಿತರು ಮತ್ತು ಸಾಮಾನ್ಯರ ಪರವಾಗಿ ನಿಲ್ಲುತ್ತೇನೆ’ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ಇಂದ್ರಜಿತ್ ಲಂಕೇಶ್ (Indrajit Lankesh) ಅವರು ಅನೇಕ ವಿಚಾರಗಳ ಬಗ್ಗೆ ಆಗಾಗ ಹೇಳಿಕೆ ನೀಡುತ್ತಲೇ ಇರುತ್ತಾರೆ. ಅವರ ವಿರುದ್ಧವೂ ಕೆಲವರು ಪ್ರತಿಭಟನೆ ನಡೆಸಿದ್ದಾರೆ. ಆ ಬಗ್ಗೆ ಇಂದ್ರಜಿತ್ ಪ್ರತಿಕ್ರಿಯೆ ನೀಡಿದ್ದಾರೆ. ‘ಇಂಥ ಪ್ರತಿಭಟನೆಗಳು ನನ್ನ ತಂದೆ ಲಂಕೇಶ್ ವಿರುದ್ಧವೂ ನಡೆದಿದೆ. ಯಾವತ್ತೂ ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ. ಬಡವರು, ದಲಿತರು ಮತ್ತು ಸಾಮಾನ್ಯರ ಪರವಾಗಿ ನಿಲ್ಲುತ್ತೇನೆ. ಎಲ್ಲೇ ಅನ್ಯಾಯ ಆದರೂ ಧ್ವನಿ ಎತ್ತುತ್ತೇನೆ’ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ‘ನನ್ನ ಸಹೋದರಿ ಗೌರಿ ಲಂಕೇಶ್ (Gauri Lankesh) ಹೋರಾಟ ಮಾಡುತ್ತಲೇ ಕೊಲೆಯಾಗಿ ಹೋದಳು. ನಾನು ಸಹ ಹೋರಾಟ ಮಾಡಿಕೊಂಡು ಬಂದವನು. ನನಗೆ ಮಸಿ ಬಳಿಯುವುದಿರಲಿ, ಕೊಲೆ ಮಾಡುತ್ತೇನೆಂದು ಬೆದರಿಸಿದರೂ ನಾನು ಹೆದರುವುದಿಲ್ಲ’ ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಇದನ್ನೂ ಓದಿ:
‘ಸಿನಿಮಾ ನಟರು ಟ್ವೀಟ್ ಮಾಡಿದ್ರೆ ಸಾಲದು’; ಬೆಳಗಾವಿ ಹೋರಾಟದ ಬಗ್ಗೆ ಇಂದ್ರಜಿತ್ ಲಂಕೇಶ್ ಹೇಳಿಕೆ
‘ಕನ್ನಡದ ಬಾವುಟಕ್ಕೆ ಮರ್ಯಾದೆ ಕೊಡಲೇ ಬೇಕು’; ಧ್ರುವ ಸರ್ಜಾ ಖಡಕ್ ಮಾತು
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

