AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮಾತು ಕೇಳಿದ್ದರೆ ದರ್ಶನ್​ಗೆ ಈ ಸ್ಥಿತಿ ಬರುತ್ತಿರಲಿಲ್ಲ: ಇಂದ್ರಜಿತ್

ನನ್ನ ಮಾತು ಕೇಳಿದ್ದರೆ ದರ್ಶನ್​ಗೆ ಈ ಸ್ಥಿತಿ ಬರುತ್ತಿರಲಿಲ್ಲ: ಇಂದ್ರಜಿತ್

ಮಂಜುನಾಥ ಸಿ.
|

Updated on: Jun 13, 2024 | 6:44 PM

ಕೆಲ ವರ್ಷದ ಹಿಂದಷ್ಟೆ ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಮಾಡಿದ್ದ ಇಂದ್ರಜಿತ್ ಲಂಕೇಶ್, ಇದೀಗ ತಮ್ಮ ನಿರ್ದೇಶನದ ‘ಗೌರಿ’ ಸಿನಿಮಾದ ಪ್ರಚಾರಕಾರ್ಯದಲ್ಲಿ ನಿರತರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ದರ್ಶನ್ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿರುವುದು ಹೀಗೆ...

ಕೊಲೆ ಆರೋಪದಲ್ಲಿ ನಟ ದರ್ಶನ್ (Darshan) ಬಂಧನವಾಗಿದೆ. ಕೆಲ ವರ್ಷಗಳ ಹಿಂದಷ್ಟೆ ನಿರ್ದೇಶಕ ಇಂದ್ರಜಿತ್ ಲಂಕೇಶ್, ದರ್ಶನ್ ವಿರುದ್ಧ ದಲಿತನ ಮೇಲೆ ಹಲ್ಲೆ ಮಾಡಿರುವ ಆರೋಪ ಮಾಡಿದ್ದರು. ತಾವೊಬ್ಬ ಜವಾಬ್ದಾರಿಯುತ ಪತ್ರಕರ್ತನಾಗಿ ಸತ್ಯವನ್ನು ಜನಗಳ ಬಳಿಗೆ ತಲುಪಿಸುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದ್ದರು. ಇದೀಗ ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಟಿಸಿರುವ ‘ಗೌರಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ರಾಜ್ಯದ ವಿವಿಧೆಡೆ ಸುತ್ತಾಡುತ್ತಿದ್ದಾರೆ. ಹೋದಲ್ಲೆಲ್ಲ ಅವರಿಗೆ ದರ್ಶನ್ ಕುರಿತ ಪ್ರಶ್ನೆಗಳು ಎದುರಾಗುತ್ತಿವೆ. ಇಂದು ಮಾಧ್ಯಮಗೋಷ್ಠಿಯೊಂದರಲ್ಲಿ ದರ್ಶನ್ ಬಗ್ಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಹೀಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ