ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ: ಕೊಪ್ಪಳದಲ್ಲಿ ಯತ್ನಾಳ್ ವಿರುದ್ಧ ದೂರು ದಾಖಲಿಸಿದ ರಜಾಕ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 20, 2025 | 5:55 PM

ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಕೊಪ್ಪಳದ ಯುವಕ ಗವಿಸಿದ್ದಪ್ಪ ಕೊಲೆಯಾದ ನಂತರ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಮಾಜಿ ಸಚಿವ ಕೆಎಸ್ ಈಶ್ವರಪ್ಪರೊಂದಿಗೆ ತೆರಳಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ತಪ್ಪಾ? ಅಂತ ಪ್ರಶ್ನಿಸಿ ಹಿಂದೂ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಮದುವೆಯಾದರೆ ತಾನು ₹5 ಲಕ್ಷ ಕೊಡೋದಾಗಿ ಹೇಳಿದ್ದರು.

ಕೊಪ್ಪಳ, ಆಗಸ್ಟ್ 20: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ಕೊಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು ವಿವಾದಕ್ಕೆ ಕಾರಣವಾಗಿರುವ ವಿಷಯ ಎಲ್ಲರಿಗೂ ಗೊತ್ತಿದೆ. ಉದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತನೆಂದು ಗುರುತಿಸಿಕೊಂಡಿರುವ ಅಬ್ದುಲ್ ರಜಾಕ್ (Abdul Razaque) ಇಂದು ಕೊಪ್ಪಳದ ನಗರ ಪೊಲೀಸ್ ಠಾಣೆಯಲ್ಲಿ ಶಾಸಕನ ವಿರುದ್ಧ ದೂರು ದಾಖಲಿಸಿದರು. ರಜಾಕ್, ದೂರು ದಾಖಲಿಸಲು ಬೆಂಗಳೂರುನಿಂದ ಕೊಪ್ಪಳವರೆಗೆ ಬಂದಿದ್ದು ವಿಶೇಷ. ಪೊಲೀಸ್ ಠಾಣೆಯನ್ನು ಪ್ರವೇಶಿಸುವ ಮುನ್ನ ರಜಾಕ್ ಪ್ರಾಯಶಃ ನಗರದ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಲು ಪ್ರಯತ್ನಿಸುತ್ತಾರೆ.

ಇದನ್ನೂ ಓದಿ:  ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್​ ದಾಖಲು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.