ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯಾವುದನ್ನೂ ಸ್ಪಷ್ಟವಾಗಿ ಹೇಳದ ಸಚಿವ ಎಂಬಿ ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 25, 2025 | 1:32 PM

ಕೇಂದ್ರ ಸಚಿವರ ಜೊತೆ ನಡೆದ ಸಭೆಯ ಹಿನ್ನೆಲೆಯಲ್ಲಿ ತಮ್ಮ ಅಧಿಕಾರಿಗಳೊಂದಿಗೆ ಸೋಮವಾರ ಮತ್ತು ಮಂಗಳವಾರದಂದು ಮೀಟಿಂಗ್ ಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗುವುದಾಗಿ ಪಾಟೀಲ್ ಹೇಳಿದರು. ವಿಮಾನಯಾನ ಸಚಿವರೊಂದಿಗೆ ನಡೆದ ಸಭೆ ಅತ್ಯಂತ ಫಲಪ್ರದವಾಗಿತ್ತು ಮತ್ತು ರಾಜ್ಯಕ್ಕೆ ಲಾಭದಾಯಕವಾಗುವ ಅನೇಕ ಸಲಹೆಗಳನ್ನು ಸಚಿವ ನೀಡಿದರು ಎಂದು ಪಾಟೀಲ್ ಹೇಳಿದರು.

ಬೆಂಗಳೂರು, ಜುಲೈ 25: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ತಮ್ಮ ಅಧಿಕಾರಿಗಳೊಂದಿಗೆ ನಿನ್ನೆ ಕೇಂದ್ರ ವಿಮಾನಯಾನ ಖಾತೆ ಸಚಿವ ಕೆ ರಾಂ ಮೋಹನ್ ನಾಯ್ಡು (K Ram Mohan Naidu) ಅವರನ್ನು ಭೇಟಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಸಚಿವರೊಂದಿಗೆ ಚರ್ಚೆಯಾಗಿದೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಿದ್ದಾರೆ, ವರದಿಯನ್ನು ಆದಷ್ಟು ಬೇಗ ತಮಗೆ ನೀಡಿದರೆ ಮುಂದಿನ ತಯಾರಿಗಳನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾಗಿ ಪಾಟೀಲ್ ತಿಳಿಸಿದರು. ಕೇಂದ್ರ ಸಚಿವರೊಂದಿಗೆ ಮೈಸೂರು, ಕಲಬುರಗಿ, ಶಿವಮೊಗ್ಗ, ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣಗಳ ಬಗ್ಗೆಯೂ ಚರ್ಚಿಸಲಾಯಿತು ಎಂದು ಪಾಟೀಲ್ ಹೇಳಿದರು.

ಇದನ್ನೂ ಓದಿ:  ಬೆಂಗಳೂರು-ವಿಜಯಪುರ ರೈಲು ಪ್ರಯಾಣ 15ರಿಂದ 10 ಗಂಟೆಗೆ ಇಳಿಕೆ: ಎಂಬಿ ಪಾಟೀಲ್ ಮಹತ್ವದ ಚರ್ಚೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.