ತುಂಗಭದ್ರಾ ಜಲಾಶಯದಲ್ಲಿ ಸ್ಟಾಪ್ ಗೇಟ್ ಅಳವಡಿಸುವ ಕಾರ್ಯ ಶನಿವಾರ ಮುಗಿಯಲಿದೆ: ಜಮೀರ್ ಅಹ್ಮದ್

ಕಿತ್ತುಹೋಗಿರುವ ಜಲಾಶಯದ ಕ್ರೆಸ್ಟ್ ಗೇಟ್ ವೀಕ್ಷಿಸಲು ನಿನ್ನೆ ಅಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಜಮೀರ್ ಅಹ್ಮದ್ ಸಹ ಇದ್ದರು. ಸಿದ್ದರಾಮಯ್ಯ ವಾಪಸ್ಸು ಹೋಗಿದ್ದಾರೆ ಮತ್ತು ಸಚಿವ ಇಲ್ಲೇ ಉಳಿದುಕೊಂಡಿರುವಂತಿದೆ. ಸ್ಟಾಪ್ ಗೇಟ್ ಅಳವಡಿಸುವವರೆಗೆ ಕೊಪ್ಪಳದಲ್ಲೇ ಇರುವಂತೆ ಸಿಎಂ ಹೇಳಿರಬಹುದು.

ತುಂಗಭದ್ರಾ ಜಲಾಶಯದಲ್ಲಿ ಸ್ಟಾಪ್ ಗೇಟ್ ಅಳವಡಿಸುವ ಕಾರ್ಯ ಶನಿವಾರ ಮುಗಿಯಲಿದೆ: ಜಮೀರ್ ಅಹ್ಮದ್
|

Updated on: Aug 14, 2024 | 4:16 PM

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಕಿತ್ತುಹೋಗಿರುವ 19 ನೇ ಕ್ರೆಸ್ಟ್ ಗೇಟ್ ಜಾಗದಲ್ಲಿ ಹೊಸ ಸ್ಟಾಪ್ ಗೇಟನ್ನು ಜೋಡಿಸುವ ಕೆಲಸ ಇನ್ನೂ ಆರಂಭವಾಗಿಲ್ಲ. ಇವತ್ತು ಮಧ್ಯಾಹ್ನ ಗೇಟ್ ಗೆ ಪೂಜೆ ನೆರವೇರಿಸಲಾಗಿದ್ದು ಅಳವಡಿಕೆ ಕೆಲಸ ಸಾಯಂಕಾಲ ಆರಂಭವಾಗಲಿದೆಯೆಂದು ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಹೇಳಿದರು. ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ ಜಮೀರ್, ಸ್ಟಾಪ್ ಗೇಟ್ ಜೋಡಿಸುವ ಕೆಲಸ ಇಂದು ಸಾಯಂಕಾಲ ಆರಂಭಗೊಳ್ಳಲಿದೆ ಮತ್ತು ಆಗಸ್ಟ್ 16 ಇಲ್ಲವೇ 17 ರವರೆಗೆ ಕೆಲಸ ಮುಗಿಸಿ ಕೊಡುವುದಾಗಿ ಗುತ್ತಿಗೆ ಪಡೆದಿರುವ ಸಂಸ್ಥೆಯ ಇಂಜಿನೀಯರ್ ಗಳು ಹೇಳಿರುವರೆಂದು ತಿಳಿಸಿದರು. ಜಲಾಶಯದಲ್ಲಿ ನೀರಿನ ಪ್ರಮಾಣ ಜಾಸ್ತಿ ಇರೋದ್ರಿಂದ ಗೇಟ್ ಜೋಡಿಸುವ ಕಾರ್ಯ ವಿಳಂಬಗೊಳ್ಳುತ್ತಿದೆ ಎಂದು ಹೇಳಿದ ಜಮೀರ್, ಜಲಾಶಯದಲ್ಲಿ ಸದ್ಯಕ್ಕೆ 93 ಟಿಎಂಸಿ ನೀರು ಇದೆ ಎಂದರು. ಕಟ್ ಆಗಿರುವ ಚೇನ್ ಲಿಂಕ್ ಅನ್ನು ದುರಸ್ತಿ ಮಾಡಬೇಕಾದರೆ ಜಲಾಶಯದಿಂದ 60 ಟಿಎಂಸಿ ನೀರನ್ನು ಹೊರಬಿಡಬೇಕಾಗುತ್ತದೆ, ಆದರೆ ಸ್ಟಾಪ್ ಗೇಟನ್ನು ಅಳವಡಿಕೆಯನ್ನು ನೀರು ಉಳಿಸಿಕೊಂಡೇ ಮಾಡಬಹುದು ಎಂದು ಜಮೀರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ತುಂಗಭದ್ರಾ ಜಲಾಶಯದಿಂದ ನೀರು ಹೊರಬಿಡುವ ಕಾರ್ಯ ಆರಂಭ, ಪ್ರವಾಹದ ಭೀತಿಯಲ್ಲಿ ಜನ

Follow us
ತಪ್ಪು ಎನ್ನುವ ಕಾರಣಕ್ಕೆ ವ್ಯಕ್ತಿಯೇ ಗೊತ್ತಿಲ್ಲ ಅನ್ನೋದಕ್ಕೆ ಆಗಲ್ಲ; ರಮೇಶ್
ತಪ್ಪು ಎನ್ನುವ ಕಾರಣಕ್ಕೆ ವ್ಯಕ್ತಿಯೇ ಗೊತ್ತಿಲ್ಲ ಅನ್ನೋದಕ್ಕೆ ಆಗಲ್ಲ; ರಮೇಶ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​