ಯಡಿಯೂರಪ್ಪನವರು ವಿಷಯಾಂತರ ಮಾಡದೆ ನಿರ್ಮಲಾ ಸೀತಾರಾಮನ್ ನೀಡಿದ ಹೇಳಿಕೆಗೆ ಉತ್ತರ ಕೊಡಲಿ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 11, 2024 | 2:26 PM

ನಮ್ಮ ತೆರಿಗೆ ನಮ್ಮ ಹಕ್ಕು ಅಂತ ರಾಜ್ಯ ಸರ್ಕಾರ ಪ್ರದರ್ಶನ ಮಾಡಿದ್ದಕ್ಕೆ ಉತ್ತರ ಕೊಡಬೇಕು, ಮತ್ತು ತಾನು ಕಣ್ಣೀರು ಹಾಕಿದ್ಯಾಕೆ ಅನ್ನೋದಕ್ಕೂ ಯಡಿಯೂರಪ್ಪ ಉತ್ತರ ಕೊಡಬೇಕು ಎಂದು ಶಿವಕುಮಾರ್ ಹೇಳಿದರು. ಕಾಂಗ್ರೆಸ್ ಗೆ ವೋಟು ನೀಡಿದರೆ ಭಯೋತ್ಪಾದಕರಿಗೆ ನೀಡಿದಂತೆ ಅಂತ ಯಡಿಯೂರಪ್ಪ ಹೇಳಿದ್ದನ್ನು ನೀತಿ ಸಂಹಿತೆ ಅಡಿಯಲ್ಲಿ ಚುನಾವಣಾ ಆಯೋಗ ಗಮನಿಸುತ್ತದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು (Rahul Gandhi) ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಬೆಂಗಳೂರಲ್ಲಿ ನೆಲೆಗೊಂಡಿರುವ ಎಚ್ ಎ ಎಲ್ ಸಂಸ್ಥೆಯನ್ನು ಮುಚ್ಚುವ ಹುನ್ನಾರ ನಡೆಸಿದ್ದಾರೆ, ಅದರೆ ಅದು ಅದು ಮತ್ತಷ್ಟು ಅಭಿವೃದ್ಧಿ ಹೊಂದಿದೆ, ಹಾಗಾಗಿ ರಾಹುಲ್ ಅವರನ್ನು ಕರೆತಂದು ಕ್ಷಮೆ ಕೇಳಿಸುವ ಕೆಲಸವನ್ನು ಡಿಕೆ ಶಿವಕುಮಾರ್ (DK Shivakumar) ಮಾಡುತ್ತಾರೆಯೇ ಅಂತ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ ಅಂತ ಪತ್ರಕರ್ತರು ಕೆಪಿಸಿಸಿ ಅಧ್ಯಕ್ಷರಿಗೆ ಕೇಳಿದಾಗ ಅವರು, ಈ ಸಮಯದಲ್ಲಿ ತಾನು ಈ ಪ್ರಶ್ನೆಗೆ ಉತ್ತರ ನೀಡುವುದು ಸೂಕ್ತ ಅಲ್ಲ ಎಂದರು. ಮುಂದುವರಿದು ಮಾತಾಡಿದ ಅವರು ಯಡಿಯೂರಪ್ಪ ವಿನಾಕಾರಣ ವಿಷಯಗಳನ್ನು ಡೀವಿಯೇಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ, ಅಸಲಿಗೆ ಅವರು ಉತ್ತರ ಕೊಡಬೇಕಿರುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ ಮತ್ತು ತಮ್ಮ ಬೇಡಿಕೆಗೆ ಎಂದರು. ನಮ್ಮ ತೆರಿಗೆ ನಮ್ಮ ಹಕ್ಕು ಅಂತ ರಾಜ್ಯ ಸರ್ಕಾರ ಪ್ರದರ್ಶನ ಮಾಡಿದ್ದಕ್ಕೆ ಉತ್ತರ ಕೊಡಬೇಕು, ಮತ್ತು ತಾನು ಕಣ್ಣೀರು ಹಾಕಿದ್ಯಾಕೆ ಅನ್ನೋದಕ್ಕೂ ಯಡಿಯೂರಪ್ಪ ಉತ್ತರ ಕೊಡಬೇಕು ಎಂದು ಶಿವಕುಮಾರ್ ಹೇಳಿದರು. ಕಾಂಗ್ರೆಸ್ ಗೆ ವೋಟು ನೀಡಿದರೆ ಭಯೋತ್ಪಾದಕರಿಗೆ ನೀಡಿದಂತೆ ಅಂತ ಯಡಿಯೂರಪ್ಪ ಹೇಳಿದ್ದನ್ನು ನೀತಿ ಸಂಹಿತೆ ಅಡಿಯಲ್ಲಿ ಚುನಾವಣಾ ಆಯೋಗ ಗಮನಿಸುತ್ತದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸಮರ್ಥ ನಾಯಕತ್ವ ಮತ್ತು ಸಾಧನೆಗಳಿಲ್ಲದೆ ಕಂಗೆಟ್ಟಿರುವ ಕಾಂಗ್ರೆಸ್ ಚುನಾವಣೆಯನ್ನೇ ಮರೆತಂತಿದೆ: ಬಿಎಸ್ ಯಡಿಯೂರಪ್ಪ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.