HD Kumaraswamy: ಸೋತಿದ್ದಕ್ಕೆ ಆತ್ಮವಿಮರ್ಶೆ ಮಾಡಿಕೊಳ್ಳುವ ಬದಲು ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ಹತಾಷೆ ವ್ಯಕ್ತಪಡಿಸುತ್ತಿದ್ದಾರೆ!

HD Kumaraswamy: ಸೋತಿದ್ದಕ್ಕೆ ಆತ್ಮವಿಮರ್ಶೆ ಮಾಡಿಕೊಳ್ಳುವ ಬದಲು ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ಹತಾಷೆ ವ್ಯಕ್ತಪಡಿಸುತ್ತಿದ್ದಾರೆ!
|

Updated on: May 26, 2023 | 2:04 PM

ಚುನಾವಣೆ ಆಯೋಗದ ಮುಂದೆ ನೀಡಬೇಕಾದ ದೂರನ್ನು ಸುದ್ದಿಗೋಷ್ಟಿಗಳನ್ನು ನಡೆಸುತ್ತಾ ಮಾಧ್ಯಮಗಳ ಮುಂದೆ ಅವಲತ್ತುಕೊಳ್ಳುತ್ತಿದ್ದಾರೆ.

ಬೆಂಗಳೂರು: ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಯಾವುದೇ ಪಕ್ಷದ ನೆರವಿಲ್ಲದೆ ಸರ್ಕಾರ ರಚಿಸುವ ಮಾತಾಡುತ್ತಿದ್ದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಜನ ನೀಡಿದ ತೀರ್ಪಿನಿಂದ ಕಂಗಾಲಾಗಿದ್ದಾರೆ. 2018 ರಲ್ಲಿ ಜೆಡಿಎಸ್ ಗೆ 37 ಸ್ಥಾನ ಸಿಕ್ಕಿದ್ದರೆ ಈ ಬಾರಿ ಅದರ ಅರ್ಧದಷ್ಟು (19) ಮಾತ್ರ ಸಿಕ್ಕಿವೆ. ಖುದ್ದು ಅವರ ಮಗ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಮನಗರ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ತಮ್ಮ ಹತಾಷೆಯನ್ನು ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಮೇಲೆ ತೆಗೆಯುತ್ತಿರುವುದು ಆಶ್ಚರ್ಯ ಹುಟ್ಟಿಸುತ್ತದೆ. ಚುನಾವಣೆ ಆಯೋಗದ ಮುಂದೆ ನೀಡಬೇಕಾದ ದೂರನ್ನು ಸುದ್ದಿಗೋಷ್ಟಿಗಳನ್ನು ನಡೆಸುತ್ತಾ ಮಾಧ್ಯಮಗಳ ಮುಂದೆ ಅವಲತ್ತುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಪಾರದರ್ಶಕ ಚುನಾವಣೆ ಹೇಗೆ ನಡೆಸುತ್ತಾರೆ ಅಂತ ಅರ್ಥವಾಗಲಿಲ್ಲ. ಕುಮಾರಸ್ವಾಮಿ ತಾವು ಕೂಡ ಮತದಾರರಿಗೆ ದುಡ್ಡು ಹಂಚಿದ್ದನ್ನು ಅಂಗೀಕರಿಸುತ್ತಾರೆ ಮತ್ತು ಅದೇ ವೇಳೆ ಡೆಬಿಟ್ ಕಾರ್ಡ್ ಗಳಂತೆ ಕಾಣುವ ಕಾರ್ಡ್ ಗಳನ್ನು ತೋರಿಸಿ ಕಾಂಗ್ರೆಸ್ ಪಕ್ಷ ಮತದಾರರಿಗೆ ಹಂಚಿದೆ ಎಂದು ಹೇಳುತ್ತಾರೆ. ಅವರ ಮಾತುಗಳು ಗೊಂದಲಕ್ಕೆ ದೂಡುವುದರಲ್ಲಿ ಸಂದೇಹವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ