HD Kumaraswamy: ಸೋತಿದ್ದಕ್ಕೆ ಆತ್ಮವಿಮರ್ಶೆ ಮಾಡಿಕೊಳ್ಳುವ ಬದಲು ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ಹತಾಷೆ ವ್ಯಕ್ತಪಡಿಸುತ್ತಿದ್ದಾರೆ!

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2023 | 2:04 PM

ಚುನಾವಣೆ ಆಯೋಗದ ಮುಂದೆ ನೀಡಬೇಕಾದ ದೂರನ್ನು ಸುದ್ದಿಗೋಷ್ಟಿಗಳನ್ನು ನಡೆಸುತ್ತಾ ಮಾಧ್ಯಮಗಳ ಮುಂದೆ ಅವಲತ್ತುಕೊಳ್ಳುತ್ತಿದ್ದಾರೆ.

ಬೆಂಗಳೂರು: ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಯಾವುದೇ ಪಕ್ಷದ ನೆರವಿಲ್ಲದೆ ಸರ್ಕಾರ ರಚಿಸುವ ಮಾತಾಡುತ್ತಿದ್ದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಜನ ನೀಡಿದ ತೀರ್ಪಿನಿಂದ ಕಂಗಾಲಾಗಿದ್ದಾರೆ. 2018 ರಲ್ಲಿ ಜೆಡಿಎಸ್ ಗೆ 37 ಸ್ಥಾನ ಸಿಕ್ಕಿದ್ದರೆ ಈ ಬಾರಿ ಅದರ ಅರ್ಧದಷ್ಟು (19) ಮಾತ್ರ ಸಿಕ್ಕಿವೆ. ಖುದ್ದು ಅವರ ಮಗ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಮನಗರ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ತಮ್ಮ ಹತಾಷೆಯನ್ನು ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಮೇಲೆ ತೆಗೆಯುತ್ತಿರುವುದು ಆಶ್ಚರ್ಯ ಹುಟ್ಟಿಸುತ್ತದೆ. ಚುನಾವಣೆ ಆಯೋಗದ ಮುಂದೆ ನೀಡಬೇಕಾದ ದೂರನ್ನು ಸುದ್ದಿಗೋಷ್ಟಿಗಳನ್ನು ನಡೆಸುತ್ತಾ ಮಾಧ್ಯಮಗಳ ಮುಂದೆ ಅವಲತ್ತುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಪಾರದರ್ಶಕ ಚುನಾವಣೆ ಹೇಗೆ ನಡೆಸುತ್ತಾರೆ ಅಂತ ಅರ್ಥವಾಗಲಿಲ್ಲ. ಕುಮಾರಸ್ವಾಮಿ ತಾವು ಕೂಡ ಮತದಾರರಿಗೆ ದುಡ್ಡು ಹಂಚಿದ್ದನ್ನು ಅಂಗೀಕರಿಸುತ್ತಾರೆ ಮತ್ತು ಅದೇ ವೇಳೆ ಡೆಬಿಟ್ ಕಾರ್ಡ್ ಗಳಂತೆ ಕಾಣುವ ಕಾರ್ಡ್ ಗಳನ್ನು ತೋರಿಸಿ ಕಾಂಗ್ರೆಸ್ ಪಕ್ಷ ಮತದಾರರಿಗೆ ಹಂಚಿದೆ ಎಂದು ಹೇಳುತ್ತಾರೆ. ಅವರ ಮಾತುಗಳು ಗೊಂದಲಕ್ಕೆ ದೂಡುವುದರಲ್ಲಿ ಸಂದೇಹವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.