ಸಿದ್ದರಾಮಯ್ಯ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ, ಕುಮಾರಸ್ವಾಮಿ ಬೇಕಾಬಿಟ್ಟಿ ಕಾಮೆಂಟ್ ಮಾಡೋದನ್ನು ನಿಲ್ಲಿಸಲಿ: ಎನ್ ಚೆಲುವರಾಯಸ್ವಾಮಿ
ಸಿದ್ದರಾಮಯ್ಯ ರಾಜ್ಯದ 100 ಕ್ಷೇತ್ರಗಳಿಂದ ಸ್ಪರ್ಧಿಸಿದರೂ ಗೆಲ್ಲುತ್ತಾರೆ, ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ವಿರುದ್ಧ ಮಾತಾಡುವುದನ್ನು ನಿಲ್ಲಿಸಿ ತಮ್ಮ ಕೆಲಸ ನೋಡಿಕೊಳ್ಳುವುದು ಒಳಿತು ಎಂದು ಚೆಲುವರಾಯಸ್ವಾಮಿ ಹೇಳಿದರು.
ಬೆಂಗಳೂರು: ಒಂದು ಜಮಾನದಲ್ಲಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಎನ್ ಚೆಲುವರಾಯಸ್ವಾಮಿ (N Cheluvarayaswamy) ಗಳಸ್ಯ ಕಂಠಸ್ಯ ಆಗಿದ್ದವರು. ಚೆಲುವರಾಯಸ್ವಾಮಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಬಳಿಕ ಇವರಿಬ್ಬರ ನಡುವಿನ ಸಂಬಂಧ ಎಣ್ಣೆ ಸೀಗೆಕಾಯಿಯಂತಾಗಿದೆ. ಕುಮಾರಸ್ವಾಮಿಯವರು ಸಿದ್ದರಾಮಯ್ಯ (Siddaramaiah) ಬಗ್ಗೆ ಕಾಮೆಂಟ್ ಮಾಡುತ್ತಲೇ ಇರುತ್ತಾರೆ. ಸಿದ್ದರಾಮಯ್ಯಗೆ ಕ್ಷೇತ್ರ ಸಿಗುತ್ತಿಲ್ಲ ಅಂತ ಅವರು ಹೇಳಿದ್ದಕ್ಕೆ ಕೋಪಗೊಂಡಿರುವ ಚೆಲುವರಾಯಸ್ವಾಮಿ, ಸಿದ್ದರಾಮಯ್ಯನವರಿಗೆ 4-5 ಕಡೆಗಳಿಂದ ಸ್ಪರ್ಧಿಸುವಂತೆ ಆಹ್ವಾನಗಳು ಬರುತ್ತಿರುವುದರಿಂದ ಯೋಚನೆ ಮಾಡಿ ಕ್ಷೇತ್ರ ಆರಿಸಿಕೊಳ್ಳಿ ಎಂದು ಹೈಕಮಾಂಡ್ ಹೇಳಿದೆ, ಕೋಲಾರ ಬೇಡ ಅಂತ ಹೇಳಿಲ್ಲ ಎಂದರು. ಸಿದ್ದರಾಮಯ್ಯ ಕೋಲಾರ, ಬಾದಾಮಿ ಮಾತ್ರವಲ್ಲ ರಾಜ್ಯದ 100 ಕ್ಷೇತ್ರಗಳಿಂದ ಸ್ಪರ್ಧಿಸಿದರೂ ಗೆಲ್ಲುತ್ತಾರೆ, ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ವಿರುದ್ಧ ಮಾತಾಡುವುದನ್ನು ನಿಲ್ಲಿಸಿ ತಮ್ಮ ಕೆಲಸ ನೋಡಿಕೊಳ್ಳುವುದು ಒಳಿತು ಎಂದು ಚೆಲುವರಾಯಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಪೆಟ್ರೋಲ್ ಬಂಕ್ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

