ಅನಿವಾರ್ಯ ಕಾರಣಗಳಿಂದಾಗಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಿಳಾ ದಿನಾಚರಣೆ ಆಚರಿಸಲಾಗಿದೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2025 | 6:11 PM

ಮಾರ್ಚ್ 8ರಂದೇ ಕಚೇರಿಯಲ್ಲಿ ಮಹಿಳಾ ದಿನಾಚಾರಣೆ ಅಚರಿಸಲು ಮಹಿಳಾ ಕೆಪಿಸಿಸಿ ಅಧ್ಯಕ್ಷೆ ಸೌಮ್ಯರೆಡ್ಡಿ ಸಕಲ ತಯಾರಿ ಮಾಡಿಕೊಂಡಿದ್ದರು, ಅದರೆ ಬೇರೆ ಬೇರೆ ಕಾರಣಗಳಿಂದಾಗಿ ತಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲಭ್ಯರಿಲ್ಲದ ಕಾರಣ ಇವತ್ತು ಇಲ್ಲಿ ಕಾರ್ಯಕ್ರಮ ನಡೆಸುತ್ತಿದ್ದಾರೆ, ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಷಯಗಳು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, 15 ಮಾರ್ಚ್: ನಗರದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು (International Women’s Day ) ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿಂದಿನ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಪುಸ್ತಕವೊಂದರಲ್ಲಿ ಬರೆದಿರುವ ಮಾತನ್ನು ಉಲ್ಲೇಖಸಿದರು. ಜನರನ್ನು ಎಬ್ಬಿಸುವ ಮೊದಲು ಮಹಿಳೆಯರನ್ನು ಎಬ್ಬಿಸಬೇಕು, ಮಹಿಳೆ ಮುಂದೆ ಸಾಗಿದರೆ ಆಕೆಯೊಂದಿಗೆ ಕುಟುಂಬ ಸಾಗುತ್ತದೆ, ಗ್ರಾಮ ಸಾಗುತ್ತದೆ ಮತ್ತು ದೇಶವೂ ಸಾಗುತ್ತದೆ ಎಂದು ಅವರು ಬರೆದಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ: ಡಿಕೆ ಶಿವಕುಮಾರ್ ಆಯೋಜಿಸಿದ ಔತಣಕೂಟದಲ್ಲಿ ಇಬ್ಬರು ಬಿಜೆಪಿ ಶಾಸಕರು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.