ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಅಗ್ನಿ ಅವಗಢದ ತನಿಖೆ ಮೂರು ಆಯಾಮಗಳಲ್ಲಿ ನಡೆಯಲಿದೆ: ಡಿಕೆ ಶಿವಕುಮಾರ್, ಡಿಸಿಎಮ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 12, 2023 | 10:59 AM

ಬೆಂಕಿ ಹೊತ್ತಿಕೊಂಡಾಗ ಅಲ್ಲಿ ಸಿಬ್ಬಂದಿ ವರ್ಗದ ಇಬ್ಬರು ಸ್ಥಳದಲ್ಲಿದ್ದರೂ ಲಭ್ಯವಿದ್ದ ಫೈರ್ ಎಕ್ಸ್​ಟಿಂಗ್ವಿಷರ್ ನೆರವಿನಿಂದ ನಂದಿಸುವ ಪ್ರಯತ್ನ ಮಾಡದೆ ಅಲ್ಲಿಂದ ಪಲಾಯನಗೈದಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಕಳೆದ ರಾತ್ರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕೇಂದ್ರ ಕಚೇರಿಯಲ್ಲಿ ನಡೆದ ಅಗ್ನಿ ಅವಗಢದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿವರಣೆ ನೀಡಿದ್ದಾರೆ. ಬಿಬಿಎಂಪಿ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಬೆಂಕಿ ಹೊತ್ತಿಕೊಂಡಾಗ ಅಲ್ಲಿ ಸಿಬ್ಬಂದಿ ವರ್ಗದ ಇಬ್ಬರು ಸ್ಥಳದಲ್ಲಿದ್ದರೂ ಲಭ್ಯವಿದ್ದ ಫೈರ್ ಎಕ್ಸ್ ಟಿಂಗ್ವಿಷರ್ (Fire Extinguisher) ನೆರವಿನಿಂದ ನಂದಿಸುವ ಪ್ರಯತ್ನ ಮಾಡದೆ ಅಲ್ಲಿಂದ ಪಲಾಯನಗೈದಿದ್ದಾರೆ, ಪೊಲೀಸರು ಅವರನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಕೂರಿಸಿದ್ದಾರೆ ಎಂದು ಹೇಳಿದರು. ಅಗ್ನಿ ಆಕಸ್ಮಿಕದ ಘಟನೆಯನ್ನು ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು, ಒಂದ ಇಲಾಖಾ ತನಿಖೆ, ಎರಡನೇಯದ್ದು ಪೊಲೀಸ್ ತನಿಖೆ ಮತ್ತು ಎಲೆಕ್ಟ್ರಿಕಲ್ ಇನ್ ಸ್ಪೆಕ್ಟೋರೇಟ್ (electrical inspectorate) ಅಂತ ಒಂದು ವಿಭಾಗವಿದ್ದು, ಅದರ ಅಧಿಕಾರಿಗಳು ಸಹ ತನಿಖೆ ನಡೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.