ಮತ್ತೆ ಆರ್​ಸಿಬಿ ಸೇರುವ ಸುಳಿವು ನೀಡಿದ ಕೆಎಲ್ ರಾಹುಲ್; ವೈರಲ್ ವಿಡಿಯೋ ನೋಡಿ

KL Rahul: ರಾಹುಲ್ ತಮ್ಮ ಹಳೆಯ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಮರಳುವ ಬಗ್ಗೆ ಊಹಾಪೋಹಗಳೂ ಹೆಚ್ಚಾಗಿದ್ದು, ಇದೀಗ ಸ್ವತಃ ರಾಹುಲ್ ಅವರೇ ಈ ಬಗ್ಗೆ ದೊಡ್ಡ ಸುಳಿವು ನೀಡಿ ಸಂಚಲನ ಮೂಡಿಸಿದ್ದಾರೆ. ರಾಹುಲ್ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಮತ್ತೆ ಆರ್​ಸಿಬಿಗೆ ಮರಳುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಮತ್ತೆ ಆರ್​ಸಿಬಿ ಸೇರುವ ಸುಳಿವು ನೀಡಿದ ಕೆಎಲ್ ರಾಹುಲ್; ವೈರಲ್ ವಿಡಿಯೋ ನೋಡಿ
|

Updated on:Sep 15, 2024 | 7:05 PM

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಪ್ರಸ್ತುತ ಚೆನ್ನೈನಲ್ಲಿ ಟೆಸ್ಟ್ ಸರಣಿಗಾಗಿ ತಯಾರಿ ನಡೆಸುತ್ತಿದ್ದಾರೆ. ಆದರೆ ಈ ಎಲ್ಲದರ ನಡುವೆ, ಐಪಿಎಲ್‌ನಲ್ಲಿ ರಾಹುಲ್ ಯಾವ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಬಗ್ಗೆ ಬಿಗ್​ ಅಪ್​ಡೇಟ್​ ಹೊರಬಿದ್ದಿದೆ. ವಾಸ್ತವವಾಗಿ ಕಳೆದ 3 ಸೀಸನ್‌ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿರುವ ರಾಹುಲ್ ಮುಂದಿನ ಸೀಸನ್‌ನಲ್ಲೂ ಲಕ್ನೋ ತಂಡದಲ್ಲೇ ಉಳಿಯುತ್ತಾರಾ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ. ಅಲ್ಲದೆ ಈ ನಡುವೆ ರಾಹುಲ್ ತಮ್ಮ ಹಳೆಯ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಮರಳುವ ಬಗ್ಗೆ ಊಹಾಪೋಹಗಳೂ ಹೆಚ್ಚಾಗಿದ್ದು, ಇದೀಗ ಸ್ವತಃ ರಾಹುಲ್ ಅವರೇ ಈ ಬಗ್ಗೆ ದೊಡ್ಡ ಸುಳಿವು ನೀಡಿ ಸಂಚಲನ ಮೂಡಿಸಿದ್ದಾರೆ. ರಾಹುಲ್ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಮತ್ತೆ ಆರ್​ಸಿಬಿಗೆ ಮರಳುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿಗೆ ಮರಳುವ ಸುಳಿವು ನೀಡಿದ ರಾಹುಲ್

ಮುಂದಿನ ವರ್ಷ ನಡೆಯಲಿರುವ ಮೆಗಾ ಹರಾಜಿಗೂ ಮುನ್ನ ರಾಹುಲ್ ಫ್ರಾಂಚೈಸಿಯನ್ನು ಬದಲಾಯಿಸುವ ಬಗ್ಗೆ ಊಹಾಪೋಹಗಳು ಆಗಿನಿಂದಲೂ ಕೇಳಿಬರುತ್ತಿವೆ. ಇದೀಗ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಅವರು ಆರ್​ಸಿಬಿಗೆ ಮರಳುವ ಸುಳಿವು ನೀಡಿದ್ದಾರೆ. ಈ ವೀಡಿಯೋದಲ್ಲಿ ಅಭಿಮಾನಿಯೊಬ್ಬ ರಾಹುಲ್‌ಗೆ, ‘ಆರ್​ಸಿಬಿ ಎಂದರೆ ನನಗೆ ತುಂಬ ಇಷ್ಟ. ಬಹಳ ವರ್ಷಗಳಿಂದ ನಾನು ಆರ್​ಸಿಬಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹೀಗಾಗಿ ನೀವು ಮತ್ತೊಮ್ಮೆ ಆರ್​ಸಿಬಿ ಫ್ರಾಂಚೈಸಿಯಲ್ಲಿ ಆಡುವುದನ್ನು ನೋಡಲು ಬಯಸುತ್ತೇನೆ ಎಂದಿದ್ದಾನೆ.

ಆದರೆ ಅಭಿಮಾನಿಯ ಈ ಹೇಳಿಕೆಗೆ ರಾಹುಲ್ ಮೊದಲು ಏನನ್ನೂ ಹೇಳಲಿಲ್ಲ. ಇದಾದ ನಂತರ ಅಭಿಮಾನಿ, ನೀವು ಇದಕ್ಕೆ ಪ್ರತಿಕ್ರಿಯಿಸಬೇಕು ಎಂದು ನಾನು ಹೇಳುತ್ತಿಲ್ಲ. ಆದರೆ ನೀವು ಮತ್ತೊಮ್ಮೆ ಆರ್‌ಸಿಬಿಯಲ್ಲಿ ಉತ್ತಮ ಪ್ರದರ್ಶನ ನೀಡುವುದನ್ನು ನೋಡಲು ಬಯಸುತ್ತೇನೆ ಎಂದು ಹೇಳಿದ್ದಾನೆ. ಈ ಬಾರಿ ಪ್ರತಿಕ್ರಿಸಿದ ರಾಹುಲ್, ‘ನಾನು ಕೂಡ ಹಾಗೆ ಆಗಲಿ ಎಂದು ಆಶಿಸುತ್ತೇನೆ’ ಎಂದಿದ್ದಾರೆ. ಈ ಮೂಲಕ ರಾಹುಲ್, ತನಗೂ ಆರ್​ಸಿಬಿ ಸೇರುವ ಇಂಗಿತವಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Sun, 15 September 24

Follow us
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ