AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ತ್ಯಾಗ… ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!

IPL 2025 RR vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 47ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 209 ರನ್​ ಕಲೆಹಾಕಿತು. ಈ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ (Vaibhav Suryavanshi) 38 ಎಸೆತಗಳಲ್ಲಿ 11 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಈ ಸೆಂಚುರಿ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ 15.5 ಓವರ್​ಗಳಲ್ಲಿ 212 ರನ್ ಬಾರಿಸಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
Vaibhav Suryavanshi
ಝಾಹಿರ್ ಯೂಸುಫ್
|

Updated on: Apr 29, 2025 | 3:06 PM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ತಾರೋದಯವಾಗಿದೆ. ಅದು ಸಹ 14 ವರ್ಷದ ಹದಿ ಹರೆಯದ ದಾಂಡಿಗನ ರೂಪದಲ್ಲಿ ಎಂಬುದು ವಿಶೇಷ. ಹೌದು, ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಐಪಿಎಲ್​ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಇದೀಗ ವೈಭವ್ ಮನೆಮಾತಾಗಿದ್ದಾರೆ.

ಅಲ್ಲದೆ ಚೊಚ್ಚಲ ಸೆಂಚುರಿಯೊಂದಿಗೆ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿರುವ ಯುವ ದಾಂಡಿಗ ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾನೆ. ಈ ಸಾಧನೆಯ ಬೆನ್ನಲ್ಲೇ ಮಾತನಾಡಿದ ವೈಭವ್ ಸೂರ್ಯವಂಶಿ, ಇದಕ್ಕೆಲ್ಲಾ ತನ್ನ ಹೆತ್ತವರ ತ್ಯಾಗವೇ ಕಾರಣ ಎಂದಿದ್ದಾರೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ವೈಭವ್, ಇಂದು ನಾನು ಏನಾಗಿದ್ದೇನೋ ಅದಕ್ಕೆ ನನ್ನ ಹೆತ್ತವರೇ ಕಾರಣ. ನನ್ನ ಅಭ್ಯಾಸಕ್ಕಾಗಿ, ನನ್ನ ತಾಯಿ ರಾತ್ರಿ 11 ಗಂಟೆಗೆ ಮಲಗಿ, ಬೆಳಿಗ್ಗೆ 2 ಗಂಟೆಗೆ ಎದ್ದೇಳುತ್ತಿದ್ದರು. ಅಂದರೆ ನನಗಾಗಿ ಅವರು ಕೇವಲ ಮೂರು ಗಂಟೆಗಳ ಕಾಲ ಮಾತ್ರ ನಿದ್ರಿಸುತ್ತಿದ್ದರು.

ಹಾಗೆಯೇ ತಂದೆ ನನ್ನ ಬೆಂಬಲಕ್ಕೆ ನಿಂತಿದ್ದರು. ಇದಕ್ಕಾಗಿ ಅವರು ತಮ್ಮ ಕೆಲಸವನ್ನು ಸಹ ತೊರೆದಿದ್ದರು. ನನ್ನ ಅಣ್ಣ ಕೆಲಸ ಮಾಡುತ್ತಾ ಮನೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಇದರಿಂದ ಆರ್ಥಿಕ ಸಮಸ್ಯೆಯೊಂದಿಗೆ ಕುಟುಂಬ ನಿರ್ವಹಿಸಬೇಕಾದ ಪರಿಸ್ಥಿತಿ ಎದುರಾಗಿತ್ತು.

ಇದಾಗ್ಯೂ ತಂದೆ ನನಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದರು. ಹೀಗಾಗಿ ಇಂದಿನ ನನ್ನೆಲ್ಲಾ ಸಾಧನೆಗೆ ತಂದೆ-ತಾಯಿಯೇ ಕಾರಣ ಎಂದು ವೈಭವ್ ಸೂರ್ಯವಂಶಿ ಹೇಳಿದ್ದಾರೆ.

ಕಷ್ಟಪಟ್ಟರೆ, ದೇವರು ಎಂದಿಗೂ ಕೈ ಬಿಡಲ್ಲ. ಅದು ಇಂದು ಸಾಬೀತಾಗಿದೆ. ನಾವು ನೋಡುತ್ತಿರುವ ಫಲಿತಾಂಶಗಳು ಮತ್ತು ನಾನು ಸಾಧಿಸುತ್ತಿರುವ ಯಶಸ್ಸು ನನ್ನ ಹೆತ್ತವರಿಂದಾಗಿದೆ. ಹೀಗಾಗಿ ಎಲ್ಲಾ ಶ್ರೇಯಸ್ಸು ನನ್ನ ಹೆತ್ತವರಿಗೆ ಸಲ್ಲಬೇಕು ಎಂದು ವೈಭವ್ ಸೂರ್ಯವಂಶಿ ಹೇಳಿದ್ದಾರೆ.

ವೈಭವ್ ಸೂರ್ಯವಂಶಿ ವಿಡಿಯೋ:

ಇದೇ ವೇಳೆ ತನ್ನ ಇನಿಂಗ್ಸ್ ಬಗ್ಗೆ ಮಾತನಾಡಿದ ವೈಭವ್,  ಐಪಿಎಲ್​ನಲ್ಲಿ ಆಡುವುದು ನನಗೆ ಸಾಮಾನ್ಯ ವಿಷಯವಾಗಿತ್ತು. ನಾನು ಭಾರತದ ಪರ 19 ವರ್ಷದೊಳಗಿನವರ ತಂಡದಲ್ಲಿ ಆಡಿದ್ದೇನೆ. ದೇಶೀಯ ಮಟ್ಟದಲ್ಲಿಯೂ ಸಹ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದೇನೆ. ಮೊದಲ 10 ಎಸೆತಗಳನ್ನು ಆಡುವ ಒತ್ತಡ ನನಗಿರಲಿಲ್ಲ. ಚೆಂಡು ನನ್ನ ಕಣ್ಣಿಗೆ ಬಿದ್ದರೆ ನಾನು ಅದನ್ನು ಹೊಡೆಯುತ್ತೇನೆ ಎಂದು ನನ್ನ ಮನಸ್ಸಿನಲ್ಲಿ ಸ್ಪಷ್ಟವಾಗಿತ್ತು.

ಹೀಗಾಗಿ ನಾನು ಚೊಚ್ಚಲ ಪಂದ್ಯವನ್ನು ನನ್ನ ಮೊದಲ ಮ್ಯಾಚ್ ಎಂದೂ ಭಾವಿಸುತ್ತಿರಲಿಲ್ಲ. ಒಬ್ಬ ಅಂತರರಾಷ್ಟ್ರೀಯ ಬೌಲರ್  ನನ್ನ ಮುಂದೆ ಇದ್ದದ್ದು ನಿಜ. ವೇದಿಕೆ ಕೂಡ ದೊಡ್ಡದಾಗಿತ್ತು. ಇದಾಗ್ಯೂ ನಾನು ನನ್ನ ಆಟವನ್ನು ಆಡುತ್ತಿದ್ದೆ. ಹೀಗಾಗಿ ಎದುರಾಳಿ ಯಾರೇ ಆಗಿದ್ದರೂ ನಾನು ಚಿಂತಿತನಾಗುತ್ತಿರಲಿಲ್ಲ ಎಂದು ವೈಭವ್ ಸೂರ್ಯವಂಶಿ ಹೇಳಿದ್ದಾರೆ.

ಸದ್ಯ ನನ್ನ ಗುರಿ ಟೀಮ್ ಇಂಡಿಯಾ ಪರ ಆಡುವುದು. ನಾನು ಭಾರತಕ್ಕೆ ಕೊಡುಗೆ ನೀಡಲು ಬಯಸುತ್ತೇನೆ. ಅದಕ್ಕಾಗಿ ನಾನು ಶ್ರಮಿಸಬೇಕು. ಆ ಮಟ್ಟವನ್ನು ತಲುಪುವವರೆಗೆ ನನ್ನ ಶ್ರಮ ನಿಲ್ಲುವುದಿಲ್ಲ. ದೇಶಕ್ಕಾಗಿ ಒಳ್ಳೆಯದನ್ನು ಮಾಡಲು ಪ್ರಯತ್ನಿಸುತ್ತೇನೆ ಎಂದರು.

ಇನ್ನು ಐಪಿಎಲ್ ಆಡಲು ನಾನು ಬಹಳ ಸಮಯದಿಂದ ತಯಾರಿ ನಡೆಸುತ್ತಿದ್ದೆ. ಇದೀಗ ನಾನು ಬಯಸಿದ ರೀತಿಯಲ್ಲಿ ಶತಕ ಮೂಡಿಬಂದಿರುವುದು ನನಗೆ ಸಂತೋಷ ತಂದಿದೆ.

ಟ್ರಯಲ್ಸ್‌ನಲ್ಲಿ, ನಾನು ಚೆನ್ನಾಗಿ ಬ್ಯಾಟಿಂಗ್ ಮಾಡಿದ್ದೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಸರ್ ಮತ್ತು ತಂಡದ ವ್ಯವಸ್ಥಾಪಕ ರೋಮಿ ಭಿಂದರ್ ಸರ್ ಇದ್ದರು. ಅವರು ನಿಮ್ಮನ್ನು ತಂಡದಲ್ಲಿ ಆಯ್ಕೆ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: IPL 2025: ಎಡಗೈ ದಾಂಡಿಗರ ಸಿಡಿಲಬ್ಬರಕ್ಕೆ RCB ದಾಖಲೆ ಧೂಳೀಪಟ

ಆ ಬಳಿಕ ಅವರು ನನ್ನನ್ನು ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಸರ್‌ಗೆ ಪರಿಚಯಿಸಿದರು. ರಾಹುಲ್ ಸರ್ ಅವರಿಂದ ತರಬೇತಿ ಪಡೆಯುವುದು ನನ್ನ ಕನಸಾಗಿತ್ತು. ಅದು ಈಗ ನನಸಾಗಿದೆ. ಇತರ ಸಹಾಯಕ ಸಿಬ್ಬಂದಿ ಮತ್ತು ಹಿರಿಯ ಆಟಗಾರರಿಂದ ನನಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಅದರ ಫಲವಾಗಿ ಇಂದು ನಾನು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದೇನೆ ಎಂದು ವೈಭವ್ ಸೂರ್ಯವಂಶಿ ಹೇಳಿದ್ದಾರೆ.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್