24 ಗಂಟೆಯಲ್ಲೇ ಬಗೆಹರಿದ ಶಾಸಕರ IPL ಟಿಕೆಟ್ ಜ್ವಲಂತ ಸಮಸ್ಯೆ, ಒಬ್ಬರಿಗೆ ಎಷ್ಟು ಗೊತ್ತಾ?
ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವಿಪಕ್ಷ ನಾಯಕ ಅಶೋಕ್ , ಐಪಿಎಲ್ ಮ್ಯಾಚ್ಗಳ ಟಿಕೆಟ್ (IPL Ticket) ವಿಚಾರವಾಗಿ ಸದನದಲ್ಲಿ ಎತ್ತಿದ ಪ್ರಶ್ನೆ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ವೇದಿಕೆಯಾಗಿದೆ. ಹೌದು..ನಿನ್ನೆ (ಮಾರ್ಚ್ 26) ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಐಪಿಎಲ್ ಮ್ಯಾಚ್ಗಳ ಟಿಕೆಟ್ ಬಗ್ಗೆ ಕೇಳಿದ ಪ್ರಶ್ನೆ ಈಗ ರಾಜಕೀಯ ಜಟಾಪಟಿಗೆ ತಿರುಗಿದೆ. ಏನೋ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದಂತೆ ಸದನದಲ್ಲಿ ಐಪಿಎಲ್ ಟಿಕೆಟ್ ಬೇಡಿಕೆ ಇಟ್ಟಿದ್ದರು. ಇದಕ್ಕೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸಹ ಧ್ವನಿಗೂಡಿಸಿದ್ದರು. ಇದರ ಬೆನ್ನಲ್ಲೇ 24 ಗಂಟೆಗಳಲ್ಲಿ ಶಾಸಕರ ಐಪಿಎಲ್ ಟಿಕೆಟ್ ಸಮಸ್ಯೆ ಬಗೆಹರಿದಿದೆ.
ಬೆಂಗಳೂರು, (ಮಾರ್ಚ್ 27): ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವಿಪಕ್ಷ ನಾಯಕ ಅಶೋಕ್ , ಐಪಿಎಲ್ ಮ್ಯಾಚ್ಗಳ ಟಿಕೆಟ್ (IPL Ticket) ವಿಚಾರವಾಗಿ ಸದನದಲ್ಲಿ ಎತ್ತಿದ ಪ್ರಶ್ನೆ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ವೇದಿಕೆಯಾಗಿದೆ. ಹೌದು..ನಿನ್ನೆ (ಮಾರ್ಚ್ 26) ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಐಪಿಎಲ್ ಮ್ಯಾಚ್ಗಳ ಟಿಕೆಟ್ ಬಗ್ಗೆ ಕೇಳಿದ ಪ್ರಶ್ನೆ ಈಗ ರಾಜಕೀಯ ಜಟಾಪಟಿಗೆ ತಿರುಗಿದೆ. ಏನೋ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದಂತೆ ಸದನದಲ್ಲಿ ಐಪಿಎಲ್ ಟಿಕೆಟ್ ಬೇಡಿಕೆ ಇಟ್ಟಿದ್ದರು. ಇದಕ್ಕೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸಹ ಧ್ವನಿಗೂಡಿಸಿದ್ದರು. ಇದರ ಬೆನ್ನಲ್ಲೇ 24 ಗಂಟೆಗಳಲ್ಲಿ ಶಾಸಕರ ಐಪಿಎಲ್ ಟಿಕೆಟ್ ಸಮಸ್ಯೆ ಬಗೆಹರಿದಿದೆ.
ಶಾಸಕರು ತಮ್ಮ ಸ್ವಾರ್ಥಕ್ಕಾಗಿ ಐಪಿಎಲ್ ಟಿಕೆಟ್ಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಿದ ಬೆನ್ನಲ್ಲೇ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಇಂದು (ಮಾರ್ಚ್ 27) ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದರು. ಈ ವೇಳೆ ನಾಳೆಯ (ಮಾರ್ಚ್ 28) ಉದ್ಘಾಟನಾ ಪಂದ್ಯಕ್ಕೆ ಶಾಸಕರಿಗೆ 1+1 ಒಟ್ಟು 2 ಟಿಕೆಟ್ ನೀಡಲು ಕೆಎಸ್ಸಿಎ ಒಪ್ಪಿಕೊಂಡಿದೆ. ಸದ್ಯ ಒಬ್ಬ ಶಾಸಕರಿಗೆ ಎರಡು ಟಿಕೆಟ್ ನೀಡಲು ಒಪ್ಪಿರುವ ಕೆಎಸ್ಸಿಎ, ಮುಂದಿನ ಐಪಿಎಲ್ ಪಂದ್ಯಕ್ಕೆ 4 ಟಿಕೆಟ್ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದೆ.
ಇದನ್ನೂ ಓದಿ: ಸದನದಲ್ಲೂ ಐಪಿಎಲ್ ಟಿಕೆಟ್ ಬಗ್ಗೆ ಚರ್ಚೆ: ಮ್ಯಾಚ್ ಟಿಕೆಟ್ಗಾಗಿ ಸರ್ಕಾರವನ್ನು ಬೇಡಿದ ಶಾಸಕರು!
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ

