AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

96 ರನ್​ಗಳಿಸಿ ಬಂದ ವೈಭವ್​ನ ಗದರಿಸಿದ ರಿಯಾನ್ ಪರಾಗ್!

96 ರನ್​ಗಳಿಸಿ ಬಂದ ವೈಭವ್​ನ ಗದರಿಸಿದ ರಿಯಾನ್ ಪರಾಗ್!

ಝಾಹಿರ್ ಯೂಸುಫ್
|

Updated on: May 30, 2026 | 1:10 PM

Share

IPL 2026 GT vs RR: ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 214 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 18.4 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-19 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್ ಪ್ರವೇಶಿಸಲು ಮುಖ್ಯ ಕಾರಣ ವೈಭವ್ ಸೂರ್ಯವಂಶಿಯ ಪ್ರಚಂಡ ಬ್ಯಾಟಿಂಗ್ ಹಾಗೂ ಜೋಫ್ರಾ ಆರ್ಚರ್ ಅವರ ನಿಖರ ದಾಳಿ. ಈ ಇಬ್ಬರ ಅತ್ಯುತ್ತಮ ಪ್ರದರ್ಶನದ ಫಲವಾಗಿ ಆರ್​ಆರ್​ ತಂಡವು ಈ ಬಾರಿ ಕ್ವಾಲಿಫೈಯರ್-2 ಪಂದ್ಯವಾಡಿತ್ತು. ಆದರೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಎಲ್ಲರೂ ವಿಫಲರಾದರೂ ವೈಭವ್ ಸೂರ್ಯವಂಶಿ ಮಾತ್ರ ತಮ್ಮ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಮುಲ್ಲನ್​ಪುರ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಈ ನಿರ್ಣಾಯಕ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 47 ಎಸೆತಗಳಲ್ಲಿ 96 ರನ್ ಸಿಡಿಸಿದ್ದರು. ಹೀಗೆ ಆರ್​ಆರ್ ತಂಡವು 200ರ ಗಡಿದಾಟುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಸೂರ್ಯವಂಶಿ ಕೊನೆಯ ಎರಡು ಓವರ್​ಗಳಿರುವಾಗ ಔಟ್ ಆಗಿದ್ದರು.

ಹೀಗೆ ಔಟಾಗಿ ಡಗೌಟ್​ನಲ್ಲಿ ಬಂದು ಕುಳಿತಿದ್ದ ವೈಭವ್ ಸೂರ್ಯವಂಶಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಆಕ್ರೋಶಭರಿತರಾಗಿ ಮಾತನಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಔಟಾದ ನಿರಾಸೆಯೊಂದಿಗೆ ಕೂತಿದ್ದ ವೈಭವ್ ಸೂರ್ಯವಂಶಿ ಬಳಿ ಬಂದ ನಾಯಕ ರಿಯಾನ್ ಪರಾಗ್, ಕೈ ಸನ್ನೆ ಮಾಡುತ್ತಾ ಗದರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಅತ್ತ ವೈಭವ್ ತಲೆ ತಗ್ಗಿಸಿ ನಾಯಕನ ಸುಮ್ಮನೆ ಕೇಳಿಸಿಕೊಳ್ಳುತ್ತಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರಿಯಾನ್ ಪರಾಗ್ ನಡಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 214 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 18.4 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ.

 

 

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More